ದಕ್ಷಿಣ ಕನ್ನಡ: ಮಂಗಳೂರಿನಿಂದ ಹಾಸನಕ್ಕೆ ಕೋಕ್ ಸಾಗಿಸುತ್ತಿದ್ದ ಲಾರಿ ರಸ್ತೆ ಬದಿಯ ತೋಟಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಹಳೀರ ಬಳಿ ನಡೆದಿದೆ.ಡ್ರೈವರ್ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಇನ್ನು ಫ್ಲೈಓವರ್ ಮತ್ತು ಅಂಡರ್ ಪಾಸ್ ನಿರ್ಮಿಸುವ ಕಡೆಗಳಲ್ಲಿ ತೀರ ಕಳಪೆ ಗುಣಮಟ್ಟದ ಮತ್ತು ಅಪಾಯಕಾರಿಯಾದ ತಾತ್ಕಾಲಿಕ ರಸ್ತೆಗಳನ್ನು ಗುತ್ತಿಗೆದಾರರು ನಿರ್ಮಿಸಿದ್ದೆ ಈ ಅಪಘಾತಕ್ಕೆ ಕಾರಣ ಎಂಬ ಆಕ್ರೋಶ ವ್ಯಕ್ತವಾಗಿದೆ.



