ಆರ್ ಎಸ್.ಎಸ್ ನ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ಖಾತೆ ತೆರೆದು ಆಕ್ಷೇಪಾರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆರ್.ಎಸ್.ಎಸ್ ಪ್ರಮುಖರಾಗಿರುವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಹಿಂದೂ ಸಾಮ್ರಾಟ್ ಎಂದೇ ಕರೆಯಲ್ಪಡುವ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆಯನ್ನು ತೆರೆದು ಆಕ್ಷೇಪ ಆರ್ಹ ಸುದ್ದಿಗಳನ್ನು ಬಿತ್ತರಿಸುತ್ತಿರುವ ಬಗ್ಗೆ ದೂರು ದಾಖಲಾಗಿದೆ.
ಕಲ್ಲಡ್ಕ ಭಟ್ ಅವರ ಪೇಸ್ ಬುಕ್ ಖಾತೆಯಾಗಲಿ,
ಅಥವಾ ಇನ್ನಿತರ ಯಾವುದೇ ಸಾಮಾಜಿಕ
ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ
ಹಬ್ಬಿಸುವ ಪ್ರಯತ್ನ ಮತ್ತು ಹೆಸರನ್ನು ಕೆಡಿಸುವ ಕೆಲಸ
ಮಾಡಲಾಗುತ್ತಿದ್ದು ಈ ಬಗ್ಗೆ ಪೊಲೀಸರು ಸೂಕ್ತವಾದ
ತನಿಖೆ ನಡೆಸುವಂತೆ ಮತ್ತು ಅವರ ಮೇಲೆ ಕಾನೂನು
ಕ್ರಮವನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ
ಘಟನೆಗಳು ಪುನರಾವರ್ತನೆಯಾಗದಂತೆ ಪೊಲೀಸರು ನಿಗಾ ವಹಿಸಲು ಆಗ್ರಹಿಸಿದ್ದಾರೆ.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…