ಜನ ಮನದ ನಾಡಿ ಮಿಡಿತ

Advertisement

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಯಕ್ಷ ಕ್ರಾಂತಿಯ ಯೋಜನೆ “ಯಕ್ಷ ಧ್ರುವ” ಯಕ್ಷ ಶಿಕ್ಷಣದ ಶುಭಾರಂಭ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು

ಯಕ್ಷ ಕ್ರಾಂತಿಯ ಯೋಜನೆ ಯಕ್ಷ ಧ್ರುವ ಯಕ್ಷ ಶಿಕ್ಷಣ ದ ಶುಭಾರಂಭ.

ಪಟ್ಲ ಫೌಂಡೇಶನ್ ಯಕ್ಷಗಾನವನ್ನು ಉಳಿಸಿ ಬೆಳೆಸುವತ್ತ ಮಹತ್ತರ ಹೆಜ್ಜೆಗಳನ್ನು ಈಗಾಗಲೇ ಹಮ್ಮಿಕೊಂಡು ಅವುಗಳನ್ನು ಕಾರ್ಯಗತಗೊಳಿಸಿರುತ್ತದೆ.

ಪ್ರಸ್ತುತ ಆಧುನಿಕ ವೈಜ್ಞಾನಿಕ ಕಂಪ್ಯೂಟರೀಕರಣದ ಈ ಕಾಲಘಟ್ಟದಲ್ಲಿ ಸಂಪ್ರದಾಯಕವಾದ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಕಲಿಸಿ ಬೆಳೆಸುವ ಸದುದ್ದೇಶದಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ಎಂಬ ಪ್ರಯೋಗಕ್ಕೆ ಚಾಲನೆ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಸಿದ್ಧವಾಗಿದೆ.

ಆ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢ ಶಾಲೆಗಳಲ್ಲಿ ಉಚಿತವಾಗಿ ಫೌಂಡೇಶನಿನ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡುವುದಾಗಿ ತೀರ್ಮಾನಿಸಿ ಸಂಬಂಧಪಟ್ಟ ಇಲಾಖೆಗಳ ಅನುಮತಿಯನ್ನು ಪಡೆಯಲಾಗಿದೆ.

ಇಲಾಖಾ ಅಧಿಕಾರಿಗಳ ಉತ್ತಮ ಸ್ಪಂದನೆ ದೊರತ ಹಿನ್ನಲೆಯಲ್ಲಿ ಆಗಸ್ಟ್ 3 ನೇ ತಾರೀಖು ಗುರುವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಸರಳರೂಪದ ಉದ್ಘಾಟನಾ ಸಮಾರಂಭವು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ಕಿನ್ನಿಗೋಳಿ ಇಲ್ಲಿ ನೆರವೇರಲಿದೆ.

ಪಟ್ಲ ಫೌಂಡೇಶನ್ ವತಿಯಿಂದ ಈಗಾಗಲೇ ಈ ಸದುದ್ದೇಶದ ಯೋಜನೆಗೆ 30 ಪ್ರಸಿದ್ಧ ಯುವ ಯಕ್ಷ ಗುರುಗಳನ್ನು ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!