ದಕ್ಷಿಣ ಕನ್ನಡ : ಮುಖ್ಯಮಂತ್ರಿ ಸಿದ್ದರಾಮಯ್ಯರ ದಕ್ಷಿಣ ಕನ್ನಡ ಭೇಟಿ ವೇಳೆ, ಪ್ರತಕರ್ತರಿಗೆ ಕೊಡ ಮಾಡುವ ಉಚಿತ ಬಸ್ ಪಾಸ್ ಸೇವೆಯನ್ನು, ಸಮಾಜಕ್ಕಾಗಿ ಕೆಲಸ ಮಾಡುವ ಪತ್ರಕರ್ತರಿಗೆ ಒದಗಿಸುವಂತೆ ಮನವಿ ಮಾಡಿದರು, ಮಾಧ್ಯಮ ಪ್ರತಿನಿಧಿಗಳು ಇನ್ನೂ ಹೆಚ್ಚಿನ ಸೇವೆ ನೀಡಲು ಉಚಿತ ಬಸ್ ಪಾಸ್ ಸಹಕಾರಿಯಾಗಲಿದೆ ಹಾಗೂ ಇದನ್ನು ಆದ್ಯತೆ ಮೇರೆಗೆ ನೀಡಬೇಕಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ತಾರಾನಾಥ ಕಾಫಿಕ್ಕಾಡ್ ಲಿಖಿತ ರೂಪದಲ್ಲಿ ವಿನಂತಿಸಿದರು. ಹಾಗೂ ಕನ್ನಡ ಪತ್ರಿಕಾ ಲೋಕದ ಪಿತಾಮಹ ಡಾ.ಹೆರ್ಮನ್ ಮೊಗ್ಲಿಂಗ್ ಅವರ ಹೆಸರಿನಲ್ಲಿ ಬೆಂಗಳೂರಿನಲ್ಲಿ ರಸ್ತೆಗೆ ನಾಮಕರಣ ಹಾಗೂ ಪ್ರತಿಮೆ ನಿರ್ಮಿಸುವಂತೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.
ಕನ್ನಡ ಪತ್ರಿಕೋದ್ಯಮದ ಪಿತಾಮಹ ಮಂಗಳೂರ ಸಮಾಚಾರ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಡಾ.ಹೆರ್ಮನ್ ಮ್ಯೋಗ್ಲಿಂಗ್ ಅವರ ಹೆಸರಿನಲ್ಲಿ ರಸ್ತೆಯೊಂದಕ್ಕೆ ಹೆಸರು ನಾಮಕರಣ ಮಾಡುವುದು ಹಾಗೂ ಮ್ಯೋಗ್ಲಿಂಗ್ ಅವರ ಪ್ರತಿಮೆ ಸ್ಥಾಪನೆ ಮಾಡುವಲ್ಲಿ ತಾವು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು. ಕನ್ನಡ ಶಬ್ದಕೋಶ ರಚಿಸಿದ ರೆವರೆಂಡ್ ಕಿಟೆಲ್ ಅವರ ಹೆಸರಲ್ಲಿ ಈಗಾಗಲೇ ರಸ್ತೆಗೆ ನಾಮಕರಣ ಮಾಡಿ ಅವರ ಪ್ರತಿಮೆ ಈ ಹಿಂದೆಯೇ ಬೆಂಗಳೂರಿನಲ್ಲಿ ಸ್ಥಾಪಿಸಿದ್ದು, ಕನ್ನಡದ ಮೊದಲ ಪತ್ರಿಕೆ ‘ಮಂಗಳೂರ ಸಮಾಚಾರ’ ಪತ್ರಿಕೆ ಆರಂಭಿಸಿ ಆ ಮೂಲಕ ಕನ್ನಡ ಪತ್ರಿಕೋದ್ಯಮದದ ಶಕೆಯನ್ನು ಆರಂಭಿಸಿದ ಮ್ಯೋಗ್ಲಿಂಗ್ ಅವರ ಪ್ರತಿಮೆಯಾಗಲಿ, ಅವರ ಹೆಸರಿನಲ್ಲಿ ರಸ್ತೆಯಾಗಲಿ, ವೃತ್ತಗಳಾಗಲಿ ಕರ್ನಾಟಕದಲ್ಲಿ ಎಲ್ಲಿಯೂ ಇರುವುದಿಲ್ಲ, ಈ ಹಿನ್ನೆಲೆಯಲ್ಲಿ ತಾವು ವಿಶೇಷ ಕಾಳಜಿ ವಹಿಸಿ ಕ್ರಮ ಜರಗಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಜರ್ನಲ್ಲಿಸ್ಟ್ ಯೂನಿಯನ್ ಮನವಿ ಮಾಡಿದೆ.
ಡಾ. ಹರ್ಮನ್ ಮ್ಯೋಗ್ಲಿಂಗ್ ಅವರು ಕೇವಲ ಪತ್ರಿಕಾ ಸಂಪಾದಕರಷ್ಟೇ ಆಗಿ ಕಾರ್ಯ ಸೀಮಿತಗೊಳಿಸಿದವರಲ್ಲ. ಕನ್ನಡ ಸಾಹಿತ್ಯ ಲೋಕಕ್ಕೆ ಅನುಪಮ ಸೇವೆ ಸಲ್ಲಿಸಿದವರು ಸಂಪಾದಕರಾಗಿ ಕನ್ನಡ ಸಾರಸ್ವತ ಲೋಕಕ್ಕೆ ಚಾರಿತ್ರಿಕ ಕೊಡುಗೆಯನ್ನು ನೀಡಿದವರು ಮ್ಯೋಗ್ಲಿಂಗ್ , ಇವರ ಈ ಸಾಧನೆಯನ್ನು ಗುರುತಿಸಿ 1858 ರಲ್ಲಿ ಜರ್ಮನಿಯ ಟ್ಯೂಬಿಂಗೆನ್ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತ್ತು. ಇಂತಹ ಮಹಾನುಭಾವನ ಹೆಸರಿನಲ್ಲಿ ಕರ್ನಾಟಕದಲ್ಲಿ ಯಾವುದೇ ನೆನಪಿನ ಸ್ಮಾರಕಗಳು , ಹೆಸರುಗಳು ಇಲ್ಲದೇ ಇರುವುದು ವಿಷಾದದ ಸಂಗತಿ. ತಾವುಗಳು ಈ ನಿಟ್ಟಿನಲ್ಲಿ ಕಾಳಜಿ ವಹಿಸಿ ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರ ಹಾಗೂ ಹರ್ಮನ್ ಮ್ಯೋಗ್ಲಿಂಗ್ ಅವರ ಹೆಸರನ್ನು ಕರ್ನಾಟಕ ರಾಜ್ಯದ ಜನತೆ ಜನತೆ ಸದಾ ಸ್ಮರಣೆ ಮಾಡುವಂತಾಗಲೂ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ” ಮಂಗಳೂರು ಸಮಾಚಾರ- ಹೆರ್ಮನ್ ಮ್ಯೋಗ್ಲಿಂಗ್ ” ರಸ್ತೆ ನಾಮಕರಣ ಹಾಗೂ ಪ್ರತಿಮೆ ಸ್ಥಾಪನೆ ಮಾಡಬೇಕೆಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡಿದೆ.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ, ಕೋಶಾಧಿಕಾರಿ ಗಿರಿಧರ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯ ರಮೇಶ್ ಪೆರ್ಲ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…