ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯೋರ್ವಳ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ನಡೆಸಿದ ಗ್ಯಾಂಗ್ ರೇಪ್ ಘಟನೆಯನ್ನು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಗ್ಯಾಂಗ್ ರೇಪ್ ಮಾಡಿದ ಎಲ್ಲಾ ಆರೋಪಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡುತ್ತೇವೆ ಎಂದುಅವರು ಹೇಳಿದರು. ಸಮಾಜದ ರಕ್ಷಣೆ ಮಾಡಬೇಕಾದಬಿಜೆಪಿ ಮತ್ತು ಸಂಘಪರಿವಾರದ ಸಂಘಟನೆಯ ವ್ಯಕ್ತಿಗಳು ನೈತಿಕ ಗೂಂಡಾಗಿರಿ ಮಾಡುವುದು ಅಲ್ಲಲ್ಲಿ ಕಂಡುಬಂದಿದೆ. ವಿಟ್ಲದಲ್ಲಿ ಆಗಿರುವ ಘಟನೆ ಸಮಾಜ ತಲೆತಗ್ಗಿಸುವ ಕೆಲಸ ಎಂದು ವಿಷಾದ ವ್ಯಕ್ತಪಡಿಸಿದರು.



