ಜನ ಮನದ ನಾಡಿ ಮಿಡಿತ

Advertisement

ನಾಲ್ಕು ಅಂತಸ್ತಿನ ಕಟ್ಟಡದಿಂದ ಕುಸಿದು ಬಿದ್ದ ನೀರಿನ ಟ್ಯಾಂಕ್: ಇಬ್ಬರು ದಾರುಣ ಸಾವು

ಬೆಂಗಳೂರು : ನೀರಿನ ಟ್ಯಾಂಕ್ ಒಂದು ನಾಲ್ಕು ಅಂತಸ್ತಿನ ಕಟ್ಟಡದ ಮೇಲಿದ್ದ ಕುಸಿದು ಬಿದ್ದು ಫಾಸ್ಟ್ ಫುಡ್ ಅಂಗಡಿ ಮಾಲೀಕ ಹಾಗೂ ಗ್ರಾಹಕ ಸಾವನ್ನಪ್ಪಿರುವ ಘಟನೆ ತಡರಾತ್ರಿ ರಾಜಧಾನಿಯ ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರಲ್ಲಿ ಒಬ್ಬ ಅರುಳ್ (40) ಹಾಗೂ ಮತ್ತೊಬ್ಬನ ಗುರುತು ಇನ್ನೂ ಪತ್ತೆಯಾಗಿಲ್ಲ. ನಾಲ್ಕು ಅಂತಸ್ತಿನ ಕಟ್ಟಡದ ಮೇಲೆ ವಾಟರ್ ಟ್ಯಾಂಕ್ (ಸಿಂಟ್ಯಾಕ್ಸ್) ಇತ್ತು. ಅದೇ ಕಟ್ಟಡದ ಕೆಳಗಡೆ ತಳ್ಳುವ ಗಾಡಿಯಲ್ಲಿ ಫಾಸ್ಟ್ ಫುಡ್ ಅಂಗಡಿ ಇತ್ತು. ನೀರು ತುಂಬಿದ್ದ ಟ್ಯಾಂಕಿನಿಂದ ಕಟ್ಟಡದ ಗೋಡೆ ದುರ್ಬಲಗೊಂಡಿದೆ. ಆದ್ದರಿಂದ ಟ್ಯಾಂಕ್ ಜೊತೆಗೆ ಗೋಡೆಯೂ ನೆಲಕ್ಕೆ ಕುಸಿದು ಬಿದ್ದಿವೆ. ಪರಿಣಾಮ ಅಂಗಡಿ ಮಾಲೀಕ ಹಾಗೂ ಒಬ್ಬ ಗ್ರಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗ್ರಾಹಕರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಶಿವಾಜಿನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!