ಬೆಂಗಳೂರು : ನೀರಿನ ಟ್ಯಾಂಕ್ ಒಂದು ನಾಲ್ಕು ಅಂತಸ್ತಿನ ಕಟ್ಟಡದ ಮೇಲಿದ್ದ ಕುಸಿದು ಬಿದ್ದು ಫಾಸ್ಟ್ ಫುಡ್ ಅಂಗಡಿ ಮಾಲೀಕ ಹಾಗೂ ಗ್ರಾಹಕ ಸಾವನ್ನಪ್ಪಿರುವ ಘಟನೆ ತಡರಾತ್ರಿ ರಾಜಧಾನಿಯ ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರಲ್ಲಿ ಒಬ್ಬ ಅರುಳ್ (40) ಹಾಗೂ ಮತ್ತೊಬ್ಬನ ಗುರುತು ಇನ್ನೂ ಪತ್ತೆಯಾಗಿಲ್ಲ. ನಾಲ್ಕು ಅಂತಸ್ತಿನ ಕಟ್ಟಡದ ಮೇಲೆ ವಾಟರ್ ಟ್ಯಾಂಕ್ (ಸಿಂಟ್ಯಾಕ್ಸ್) ಇತ್ತು. ಅದೇ ಕಟ್ಟಡದ ಕೆಳಗಡೆ ತಳ್ಳುವ ಗಾಡಿಯಲ್ಲಿ ಫಾಸ್ಟ್ ಫುಡ್ ಅಂಗಡಿ ಇತ್ತು. ನೀರು ತುಂಬಿದ್ದ ಟ್ಯಾಂಕಿನಿಂದ ಕಟ್ಟಡದ ಗೋಡೆ ದುರ್ಬಲಗೊಂಡಿದೆ. ಆದ್ದರಿಂದ ಟ್ಯಾಂಕ್ ಜೊತೆಗೆ ಗೋಡೆಯೂ ನೆಲಕ್ಕೆ ಕುಸಿದು ಬಿದ್ದಿವೆ. ಪರಿಣಾಮ ಅಂಗಡಿ ಮಾಲೀಕ ಹಾಗೂ ಒಬ್ಬ ಗ್ರಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗ್ರಾಹಕರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಶಿವಾಜಿನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…