ಮಂಗಳೂರು: ಏಳು ಲಕ್ಷ ರೂಪಾಯಿ ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರನ್ನು ಜಪ್ತಿ ಮಾಡಿ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಬ್ದುಲ್ ಅಝೀಜ್ (34) ಬಂಧಿತ ಆರೋಪಿಯಾಗಿದ್ದು, ಅತನಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಚರಸ್ ಮತ್ತು ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿ ಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಫ್ಲೆಟ್ ಇಲ್ಲದ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ತಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಸೂರಿಂಜೆ ಕಿನ್ನಿಗುಡ್ಡೆ ಹೌಸ್ ನಿವಾಸಿ ಅಬ್ದುಲ್ ಅಝೀಜ್ನನ್ನು ವಶಕ್ಕೆ ಪಡೆದು ಕಾರು ಪರಿಶೀಲನೆ ಮಾಡಿದಾಗ 250 ಗ್ರಾಂ ತೂಕದ ಮಾದಕ ವಸ್ತು ಚರಸ್ ಪತ್ತೆಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಇನ್ನು ಪರಾರಿಯಾದ ಆರೊಪಿಯ ಪತ್ತೆಗಾಗಿ ಪೊಲೀಸರು ತೀವ್ರ ಕಾರ್ಯಚರಣೆ ನಡೆಸುತ್ತಿದ್ದಾರೆ. ಬಜಪೆ ಠಾಣಾ ಪಿ.ಐ. ಪ್ರಕಾಶ್ ನೇತೃತ್ವದ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿತ್ತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…