ಮಂಗಳೂರು: ಏಳು ಲಕ್ಷ ರೂಪಾಯಿ ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರನ್ನು ಜಪ್ತಿ ಮಾಡಿ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಬ್ದುಲ್ ಅಝೀಜ್ (34) ಬಂಧಿತ ಆರೋಪಿಯಾಗಿದ್ದು, ಅತನಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಚರಸ್ ಮತ್ತು ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿ ಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಫ್ಲೆಟ್ ಇಲ್ಲದ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ತಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಸೂರಿಂಜೆ ಕಿನ್ನಿಗುಡ್ಡೆ ಹೌಸ್ ನಿವಾಸಿ ಅಬ್ದುಲ್ ಅಝೀಜ್ನನ್ನು ವಶಕ್ಕೆ ಪಡೆದು ಕಾರು ಪರಿಶೀಲನೆ ಮಾಡಿದಾಗ 250 ಗ್ರಾಂ ತೂಕದ ಮಾದಕ ವಸ್ತು ಚರಸ್ ಪತ್ತೆಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಇನ್ನು ಪರಾರಿಯಾದ ಆರೊಪಿಯ ಪತ್ತೆಗಾಗಿ ಪೊಲೀಸರು ತೀವ್ರ ಕಾರ್ಯಚರಣೆ ನಡೆಸುತ್ತಿದ್ದಾರೆ. ಬಜಪೆ ಠಾಣಾ ಪಿ.ಐ. ಪ್ರಕಾಶ್ ನೇತೃತ್ವದ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿತ್ತು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…