ಜನ ಮನದ ನಾಡಿ ಮಿಡಿತ

Advertisement

ಉಡುಗೊರೆ ಹೆಸರಲ್ಲಿ ಲಕ್ಷ ಲಕ್ಷ ದೋಖಾ

ಬಂಟ್ವಾಳ : ಯುನೈಟೆಡ್ ಕಿಂಗ್‌ಡಂನಿಂದ ಉಡುಗೊರೆ ಕಳುಹಿಸುವುದಾಗಿ ಹೇಳಿ 5.90 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್ ಮೂಲಕ ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಡಾ. ಫ್ರಾಕ್ಲಿನ್ ಪ್ಯಾಟ್ರಿಕ್ ಎಂದು ಪರಿಚಯಿಸಿಕೊಂಡು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ವೈದ್ಯನಾಗಿದ್ದೇನೆ ಎಂದು ಹೇಳಿಕೊಂಡಿದ್ದ. ಕೆಲವು ದಿನಗಳ ಬಳಿಕ ಆತ ತನ್ನ ಮಗಳ ಬರ್ತ್‌ಡೇಗೆ ವಿದೇಶಿ ಕರೆನ್ಸಿ, ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ಕಳುಹಿಸುವುದಾಗಿ ತಿಳಿಸಿದ.ಜು.24ರಂದು ಇನ್ನೋರ್ವ ಅಪರಿಚಿತ ವ್ಯಕ್ತಿಯು ತನಗೆ ಕರೆ ಮಾಡಿ ‘ನಿಮಗೆ ಪಾರ್ಸೆಲ್ ಬಂದಿದ್ದು, ದಿಲ್ಲಿಗೆ ತಲುಪಿದೆ. ಅದರ ಪ್ರೊಸೆಸಿಂಗ್ ಶುಲ್ಕ ಪಾವತಿಸಬೇಕು’ ಎಂದಿದ್ದ. ಅದನ್ನು ನಂಬಿದ ತಾನು ತನ್ನ ಖಾತೆಯಿಂದ 40,000 ರೂ. ಗಳನ್ನು ಪ್ರೊಸೆಸಿಂಗ್ ಶುಲ್ಕವೆಂದು ಗೂಗಲ್‌ಪೇ ಮಾಡಿದ್ದೆ. ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ವಿವಿಧ ಕಾರಣ ನೀಡಿ ಹಂತ ಹಂತವಾಗಿ 5.90 ಲಕ್ಷ ರೂ.ವನ್ನು ಪಡೆದು ವಂಚಿಸಿದ್ದಾನೆ ಎಂದು ವಂಚನೆಗೊಳಗಾದ ವ್ಯಕ್ತಿ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!