ಬಂಟ್ವಾಳ : ಯುನೈಟೆಡ್ ಕಿಂಗ್ಡಂನಿಂದ ಉಡುಗೊರೆ ಕಳುಹಿಸುವುದಾಗಿ ಹೇಳಿ 5.90 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್ಆ್ಯಪ್ ಮೂಲಕ ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಡಾ. ಫ್ರಾಕ್ಲಿನ್ ಪ್ಯಾಟ್ರಿಕ್ ಎಂದು ಪರಿಚಯಿಸಿಕೊಂಡು ಯುನೈಟೆಡ್ ಕಿಂಗ್ಡಮ್ನಲ್ಲಿ ವೈದ್ಯನಾಗಿದ್ದೇನೆ ಎಂದು ಹೇಳಿಕೊಂಡಿದ್ದ. ಕೆಲವು ದಿನಗಳ ಬಳಿಕ ಆತ ತನ್ನ ಮಗಳ ಬರ್ತ್ಡೇಗೆ ವಿದೇಶಿ ಕರೆನ್ಸಿ, ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ಕಳುಹಿಸುವುದಾಗಿ ತಿಳಿಸಿದ.ಜು.24ರಂದು ಇನ್ನೋರ್ವ ಅಪರಿಚಿತ ವ್ಯಕ್ತಿಯು ತನಗೆ ಕರೆ ಮಾಡಿ ‘ನಿಮಗೆ ಪಾರ್ಸೆಲ್ ಬಂದಿದ್ದು, ದಿಲ್ಲಿಗೆ ತಲುಪಿದೆ. ಅದರ ಪ್ರೊಸೆಸಿಂಗ್ ಶುಲ್ಕ ಪಾವತಿಸಬೇಕು’ ಎಂದಿದ್ದ. ಅದನ್ನು ನಂಬಿದ ತಾನು ತನ್ನ ಖಾತೆಯಿಂದ 40,000 ರೂ. ಗಳನ್ನು ಪ್ರೊಸೆಸಿಂಗ್ ಶುಲ್ಕವೆಂದು ಗೂಗಲ್ಪೇ ಮಾಡಿದ್ದೆ. ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ವಿವಿಧ ಕಾರಣ ನೀಡಿ ಹಂತ ಹಂತವಾಗಿ 5.90 ಲಕ್ಷ ರೂ.ವನ್ನು ಪಡೆದು ವಂಚಿಸಿದ್ದಾನೆ ಎಂದು ವಂಚನೆಗೊಳಗಾದ ವ್ಯಕ್ತಿ ದೂರು ನೀಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…