ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಬ್ಯಾಂಕ್ ಕಚೇರಿಯಲ್ಲಿ ವಿದ್ಯುತ್ ಅವಗಡ

ಕಾರ್ಕಳ: ಬ್ಯಾಂಕ್ ಶಾಖೆಯ ಕಚೇರಿಯಲ್ಲಿ ವಿದ್ಯುತ್ ಶಾಟ್೯ ಸಕ್ಯೂ೯ಟ್ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಈ ಘಟನೆ ಆಗಸ್ಟ್ 3ರಂದು ಬೆಳಗ್ಗೆ ಕಾರ್ಕಳದ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಯಾವುದೇ ಅಗತ್ಯ ದಾಖಲೆಗಳು ಮತ್ತು ಆಸ್ತಿಗೆ ಹಾನಿಯಾಗಿಲ್ಲ.ಸುತ್ತಮುತ್ತಲಿನ ಕೆಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಬ್ಯಾಂಕ್ ಸಿಬ್ಬಂದಿಯ ಸಮಯಪ್ರಜ್ಞೆ ಯಿಂದ ಭಾರಿ ಅನಾಹುತ ತಪ್ಪಿದೆ.

ಕಚೇರಿಯೊಳಗೆ ಸುಟ್ಟ ವಾಸನೆ ಹಾಗೂ ಹೊಗೆ ಕಾಣಿಸಿಕೊಂಡ ಕ್ಷಣವೇ ಅಲ್ಲಿದ್ದ ಸಿಬ್ಬಂದಿ ದಾಖಲೆಗಳು ಹಾಗೂ ಆಸ್ತಿಯನ್ನು ಬದಿಗೆ ಸರಿಸಿ ಹೊರ ಓಡಿ ಬಂದಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಾಗೂ ಸಾರ್ವಜನಿಕರು ಜಮಾಯಿಸಿದ್ದರು. ಯಾವುದೇ ಅಗತ್ಯ ದಾಖಲೆಗಳು, ಆಸ್ತಿಗಳು ಹಾನಿಯಾಗಿಲ್ಲ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!