ಕಾರ್ಕಳ: ಬ್ಯಾಂಕ್ ಶಾಖೆಯ ಕಚೇರಿಯಲ್ಲಿ ವಿದ್ಯುತ್ ಶಾಟ್೯ ಸಕ್ಯೂ೯ಟ್ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಈ ಘಟನೆ ಆಗಸ್ಟ್ 3ರಂದು ಬೆಳಗ್ಗೆ ಕಾರ್ಕಳದ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಯಾವುದೇ ಅಗತ್ಯ ದಾಖಲೆಗಳು ಮತ್ತು ಆಸ್ತಿಗೆ ಹಾನಿಯಾಗಿಲ್ಲ.ಸುತ್ತಮುತ್ತಲಿನ ಕೆಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಬ್ಯಾಂಕ್ ಸಿಬ್ಬಂದಿಯ ಸಮಯಪ್ರಜ್ಞೆ ಯಿಂದ ಭಾರಿ ಅನಾಹುತ ತಪ್ಪಿದೆ.
ಕಚೇರಿಯೊಳಗೆ ಸುಟ್ಟ ವಾಸನೆ ಹಾಗೂ ಹೊಗೆ ಕಾಣಿಸಿಕೊಂಡ ಕ್ಷಣವೇ ಅಲ್ಲಿದ್ದ ಸಿಬ್ಬಂದಿ ದಾಖಲೆಗಳು ಹಾಗೂ ಆಸ್ತಿಯನ್ನು ಬದಿಗೆ ಸರಿಸಿ ಹೊರ ಓಡಿ ಬಂದಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಾಗೂ ಸಾರ್ವಜನಿಕರು ಜಮಾಯಿಸಿದ್ದರು. ಯಾವುದೇ ಅಗತ್ಯ ದಾಖಲೆಗಳು, ಆಸ್ತಿಗಳು ಹಾನಿಯಾಗಿಲ್ಲ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…