ಕಿನ್ನಿಗೋಳಿ: ಭಾರತೀಯ ಸಂಸ್ಕೃತಿಯ ಎಲ್ಲಾ ಕಲೆಗಳಿಗ್ಗಿಂತ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವು ವಿಶೇಷಗಳಲ್ಲಿ ವಿಶಿಷ್ಟ ಕಲೆಯಾಗಿದೆ.ಈ ಯಕ್ಷಗಾನ ಕಲೆಯಲ್ಲಿ ಲಯಬದ್ದವಾದ ಹಾಡುಗಾರಿಕೆ ವೇಷಗಾರಿಕೆಯಲ್ಲಿ ನೃತ್ಯ, ಸ್ಪಷ್ಟ ಉಚ್ಚಾರದ ಮಾತುಗಾರಿಕೆ ಹಾಗೂ ದೈಹಿಕ ವ್ಯಾಯಾಮವು ಒಳಗೊಂಡಿದೆಯೆಂದು ಶಾಸಕರಾದ ಉಮನಾಥ ಕೋಟ್ಯಾನ್ ರವರು ಕಿನ್ನಿಗೋಳಿ ಸಮೀಪದ ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಯಕ್ಷ ಶಿಕ್ಷಣ ಉಧ್ಘಾಟನಾ ಸಮಾರಂಭದಲ್ಲಿ ಹೇಳಿದರು. ಯಕ್ಷಗಾನ ಕಲಿಯಲು ನಾವು ತರಗತಿಗತಿಗಳನ್ನು ಹುಡುಕಿಕೊಂಡು ಹೋಗುವ ಪ್ರಸ್ತುತ ಸನ್ನಿವೇಶದಲ್ಲಿ ಶಾಲೆಗಳಿಗೆ ಬಂದು ಯಕ್ಷಗಾನವನ್ನು ಕಲಿಸಲು ಮುಂದೆ ಬಂದಿರುವ ಪಟ್ಲ ಸತೀಶ್ ಶೆಟ್ಟಿಯವರನ್ನು ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ ನ್ನು ಅಭಿನಂದಿಸಿದರು.
ವೇದಿಕೆಯಲ್ಲಿ ಯಕ್ಷಗಾನ ವಿದ್ವಾಂಸ ಡಾ. ಪ್ರಭಾಕರ ಜೋಷಿ, ಎಂ.ಎಲ್ ಸಾಮಗ, ಯಕ್ಷ ಶಿಕ್ಷಣದ ರೂವಾರಿ ಹಾಗೂ ಸಂಚಾಲಕ ಪಣಂಬೂರು ವಾಸು ಐತಾಳ್, ಯುಗಪುರುಷದ ಭುವನಾಭಿರಾಮ ಉಡುಪ, ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್, ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಶಾಲೆಯ ಪ್ರಿನ್ಸಿಪಾಲ್ ಪುಟ್ಟಸ್ವಾಮಿ ಉಪಸ್ಥಿತರಿದ್ದರು.ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಚಿತ್ರಕಲಾ ಶಿಕ್ಷಕ ಭವನ್ ಪಿ.ಜಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಚಿತ್ರ ಬಿಡಿಸಿದ್ದು ಅದನ್ನು ಶಾಸಕರಿಗೆ ಹಸ್ತಾಂತರಿಸಲಾಯಿತು. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮುರಳೀಧರ್ ಜಿ.ಎನ್ ಸ್ವಾಗತಿಸಿ, ಶಿಕ್ಷಕ ಮಂಜುನಾಥ ಕೆ ಧನ್ಯವಾದ ಸಮರ್ಪಿಸಿದರು. ಶಿಕ್ಷಕ ಪ್ರವೀಣ್ ಪೂಜಾರಿ ನಿರೂಪಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…