ಕಿನ್ನಿಗೋಳಿ: ಭಾರತೀಯ ಸಂಸ್ಕೃತಿಯ ಎಲ್ಲಾ ಕಲೆಗಳಿಗ್ಗಿಂತ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವು ವಿಶೇಷಗಳಲ್ಲಿ ವಿಶಿಷ್ಟ ಕಲೆಯಾಗಿದೆ.ಈ ಯಕ್ಷಗಾನ ಕಲೆಯಲ್ಲಿ ಲಯಬದ್ದವಾದ ಹಾಡುಗಾರಿಕೆ ವೇಷಗಾರಿಕೆಯಲ್ಲಿ ನೃತ್ಯ, ಸ್ಪಷ್ಟ ಉಚ್ಚಾರದ ಮಾತುಗಾರಿಕೆ ಹಾಗೂ ದೈಹಿಕ ವ್ಯಾಯಾಮವು ಒಳಗೊಂಡಿದೆಯೆಂದು ಶಾಸಕರಾದ ಉಮನಾಥ ಕೋಟ್ಯಾನ್ ರವರು ಕಿನ್ನಿಗೋಳಿ ಸಮೀಪದ ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಯಕ್ಷ ಶಿಕ್ಷಣ ಉಧ್ಘಾಟನಾ ಸಮಾರಂಭದಲ್ಲಿ ಹೇಳಿದರು. ಯಕ್ಷಗಾನ ಕಲಿಯಲು ನಾವು ತರಗತಿಗತಿಗಳನ್ನು ಹುಡುಕಿಕೊಂಡು ಹೋಗುವ ಪ್ರಸ್ತುತ ಸನ್ನಿವೇಶದಲ್ಲಿ ಶಾಲೆಗಳಿಗೆ ಬಂದು ಯಕ್ಷಗಾನವನ್ನು ಕಲಿಸಲು ಮುಂದೆ ಬಂದಿರುವ ಪಟ್ಲ ಸತೀಶ್ ಶೆಟ್ಟಿಯವರನ್ನು ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ ನ್ನು ಅಭಿನಂದಿಸಿದರು.
ವೇದಿಕೆಯಲ್ಲಿ ಯಕ್ಷಗಾನ ವಿದ್ವಾಂಸ ಡಾ. ಪ್ರಭಾಕರ ಜೋಷಿ, ಎಂ.ಎಲ್ ಸಾಮಗ, ಯಕ್ಷ ಶಿಕ್ಷಣದ ರೂವಾರಿ ಹಾಗೂ ಸಂಚಾಲಕ ಪಣಂಬೂರು ವಾಸು ಐತಾಳ್, ಯುಗಪುರುಷದ ಭುವನಾಭಿರಾಮ ಉಡುಪ, ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್, ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಶಾಲೆಯ ಪ್ರಿನ್ಸಿಪಾಲ್ ಪುಟ್ಟಸ್ವಾಮಿ ಉಪಸ್ಥಿತರಿದ್ದರು.ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಚಿತ್ರಕಲಾ ಶಿಕ್ಷಕ ಭವನ್ ಪಿ.ಜಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಚಿತ್ರ ಬಿಡಿಸಿದ್ದು ಅದನ್ನು ಶಾಸಕರಿಗೆ ಹಸ್ತಾಂತರಿಸಲಾಯಿತು. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮುರಳೀಧರ್ ಜಿ.ಎನ್ ಸ್ವಾಗತಿಸಿ, ಶಿಕ್ಷಕ ಮಂಜುನಾಥ ಕೆ ಧನ್ಯವಾದ ಸಮರ್ಪಿಸಿದರು. ಶಿಕ್ಷಕ ಪ್ರವೀಣ್ ಪೂಜಾರಿ ನಿರೂಪಿಸಿದರು.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…