ಜನ ಮನದ ನಾಡಿ ಮಿಡಿತ

Advertisement

ಅಮೃತ್ ಭಾರತ್ ಯೋಜನೆಯಡಿ ಮಂಗಳೂರು ಜಂಕ್ಷನ್ ಅಂತಾರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣ ಅಭಿವೃದ್ಧಿ; ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರ ಸಭೆ

ಅಮೃತ್ ಭಾರತ್ ಯೋಜನೆಯಡಿ ಮಂಗಳೂರು ಜಂಕ್ಷನ್ ಅಂತಾರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಆಗಸ್ಟ್ 6 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಹಾಗೂ ಕೇಂದ್ರ ರೈಲ್ವೇ ಸಚಿವರಾದ‌ ಅಶ್ವಿನ್ ವೈಷ್ಣವ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸುವ ಶಿಲಾನ್ಯಾಸ‌ ಕಾರ್ಯಕ್ರಮದ ಪೂರ್ವ ತಯಾರಿಯ ಕುರಿತು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರ ಸಭೆ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.

19.32 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದ್ದು. ಪಾದಾಚಾರಿ ಮೇಲ್ಸೇತುವೆ, ಹೊಸ ಎಸಿ ವೈಟಿಂಗ್ ಹಾಲ್, ಹೊಸ ಪಾರ್ಸೆಲ್ ಕಚೇರಿ, ಪ್ರವೇಶ ದ್ವಾರ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪರಿಸರದ ಅಭಿವೃದ್ಧಿ, ಬಸ್ ಬೇ ನಿರ್ಮಾಣ, ವಾಹನ ನಿಲುಗಡೆಗೆ ಹೊಸ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಅವರ ಪ್ರಯತ್ನದ ಫಲವಾಗಿ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಆಗಸ್ಟ್ 6 ರಂದು ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ‌ ನೆರವೇರಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡಿದ್ದಾರೆ.

ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕಾರಣಕರ್ತರಾದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಶಾಸಕ ಕಾಮತ್ ಅಭಿನಂದನೆ ಸಲ್ಲಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಪ್ಪಿನಮೊಗರು, ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!