ಹಳೆಯಂಗಡಿ: ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ ಕಳೆದ 9 ದಿನಗಳಿಂದ ನಾಪತ್ತೆಯಾದ ವ್ಯಕ್ತಿ ಪಾವಂಜೆ ಬಳಯ ರಾಷ್ಟ್ರೀಯ ಹೆದ್ದಾರಿ 66 ಪಕ್ಕದ ಪಾಳುಬಿದ್ದ ಮನೆಯಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಗ್ರಾಮದ ಪಾವಂಜೆ ಕದ್ರಾತೋಟ ನಿವಾಸಿ ದೇವದಾಸ್ ಕುಲಾಲ್ (52) ಎಂದು ತಿಳಿದು ಬಂದಿದೆ. ಕಳೆದ ಜುಲೈ 25ರಂದು ಕದ್ರಾ ತೋಟದ ತನ್ನ ಮನೆಯಿಂದ ಕೆಲಸಕ್ಕೆಂದು ಹೋದವರು ನಿಗೂಢವಾಗಿ ನಾಪತ್ತೆಯಾಗಿದ್ದು, ಗುರುವಾರ ಪಾವಂಜೆ ಪರಿಸರದಲ್ಲಿ ದುರ್ವಾಸನೆ ಬರುತ್ತಿರುವುದನ್ನು ಕಂಡು ಸ್ಥಳೀಯರು ಅನುಮಾನಾಸ್ಪದವಾಗಿ ಹುಡುಕಾಡಿದಾಗ ಪಾಳು ಬಿದ್ದ ಮನೆಯೊಳಗೆ ತೀರಾ ಕೊಳೆತ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ.
ಶವ ಪತ್ತೆಯಾದ ಸ್ಥಳದಲ್ಲಿ ಕೀಟನಾಶಕ ಪ್ಯಾಕೆಟ್ ಮತ್ತು ಎರಡು ಪ್ಲಾಸ್ಟಿಕ್ ಬಾಟಲಿಗಳು ಪತ್ತೆಯಾಗಿದ್ದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಮೃತ ಪತ್ನಿ ಮತ್ತು ಸಂಬಂಧಿಕರು ದೇವದಾಸ್ ಅವರ ಅಂಗಿ, ಪ್ಯಾಂಟ್ ನಿಂದ ಶವ ಗುರುತಿಸಲಾಗಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸಾಮಾಜಿಕ ಕಾರ್ಯಕರ್ತರಾದ ಆಪತ್ಬಾಂಧವ ಆಸಿಫ್ ಹಾಗು ಅದ್ದಿ ಬೊಳ್ಳೂರು ಇವರುಗಳ ಸಹಾಯದಿಂದ ಮೃತ ಶರೀರವನ್ನು ಎತ್ತಿ ಆಂಬುಲೆನ್ಸ್ ಮುಖಾಂತರ ಮುಲ್ಕಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಯಿತು. ಆತ್ಮಹತ್ಯೆಗೆ ಹಣಕಾಸಿನ ಸಮಸ್ಯೆ ಎಂದು ತಿಳಿದು ಬಂದಿದ್ದು ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…