ಇತ್ತೀಚಿಗಿನ ದಿನಗಳಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ವಿರುದ್ಧ ಅಪಪ್ರಚಾರ ಹಾಗೂ ಅವಹೇಳನಕಾರಿ ಹೇಳಿಕೆಗಳು ನಿರಂತರವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯನ್ನು ಖಂಡಿಸಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಬೃಹತ್ ಸಮಾವೇಶ ನಡೆಯುತ್ತಿದೆ. ಶ್ರೀ ಜನಾರ್ದನ ಸ್ವಾಮಿ ರಥ ಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆಯವರೆಗೆ ಜಾಥಾ ನಡೆದು ಬೃಹತ್ ಸಮಾವೇಶದಲ್ಲಿ ಹಕ್ಕೊತ್ತಾಯ ಮಂಡನೆ ನಡೆಯಿತು.
ಶ್ರೀ ಧರ್ಮಸ್ಥಳ ಯೋಜನೆಯ ಕಾರ್ಯನಿರ್ವಾಹಕ ಡಾಕ್ಟರ್ ಎಲ್ ಎಚ್ ಮಂಜುನಾಥ್ ಪ್ರಸ್ತಾವನೆ ನೆರವೇರಿಸಿದರು. ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಹಾಗೂ ಲಯನ್ಸ್ ಅಧ್ಯಕ್ಷ ಜಯರಾಜ್ ಹೊಸಕೋಟೆ ಅಭಿಪ್ರಾಯ ಮಂಡನೆ ಮಾಡಿದರು.ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯ ಚಂದ್ರ, ಜನಜಾಗೃತಿ ವೇದಿಕೆ ರಾಜ್ಯ ಅಧ್ಯಕ್ಷ ರಾಜಣ್ಣ ಕೊರವಿ ಹಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜೀಲರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಯ ಆಡಳಿತ ಮುಖ್ಯಸ್ಥ ಶರತ್ ಕೃಷ್ಣ ಪಡ್ಡೆಟ್ನಾಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಂದರ ಇಚ್ಚಿಲ, ಕಾಸಿಂ ಮಲ್ಲಿಗೆ ಗೌಡ ಮನೆ ಉಪಸ್ಥಿತರಿದ್ದರು. ಧರ್ಮಸ್ಥಳ ಸುಬ್ರಹ್ಮಣ್ಯ ಪ್ರಸಾದ್ ರವರಿಂದ ಹಕ್ಕೊತ್ತಾಯ ಮಂಡನೆ ಮಾಡಿದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…