ಇತ್ತೀಚಿಗಿನ ದಿನಗಳಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ವಿರುದ್ಧ ಅಪಪ್ರಚಾರ ಹಾಗೂ ಅವಹೇಳನಕಾರಿ ಹೇಳಿಕೆಗಳು ನಿರಂತರವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯನ್ನು ಖಂಡಿಸಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಬೃಹತ್ ಸಮಾವೇಶ ನಡೆಯುತ್ತಿದೆ. ಶ್ರೀ ಜನಾರ್ದನ ಸ್ವಾಮಿ ರಥ ಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆಯವರೆಗೆ ಜಾಥಾ ನಡೆದು ಬೃಹತ್ ಸಮಾವೇಶದಲ್ಲಿ ಹಕ್ಕೊತ್ತಾಯ ಮಂಡನೆ ನಡೆಯಿತು.
ಶ್ರೀ ಧರ್ಮಸ್ಥಳ ಯೋಜನೆಯ ಕಾರ್ಯನಿರ್ವಾಹಕ ಡಾಕ್ಟರ್ ಎಲ್ ಎಚ್ ಮಂಜುನಾಥ್ ಪ್ರಸ್ತಾವನೆ ನೆರವೇರಿಸಿದರು. ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಹಾಗೂ ಲಯನ್ಸ್ ಅಧ್ಯಕ್ಷ ಜಯರಾಜ್ ಹೊಸಕೋಟೆ ಅಭಿಪ್ರಾಯ ಮಂಡನೆ ಮಾಡಿದರು.ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯ ಚಂದ್ರ, ಜನಜಾಗೃತಿ ವೇದಿಕೆ ರಾಜ್ಯ ಅಧ್ಯಕ್ಷ ರಾಜಣ್ಣ ಕೊರವಿ ಹಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜೀಲರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಯ ಆಡಳಿತ ಮುಖ್ಯಸ್ಥ ಶರತ್ ಕೃಷ್ಣ ಪಡ್ಡೆಟ್ನಾಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಂದರ ಇಚ್ಚಿಲ, ಕಾಸಿಂ ಮಲ್ಲಿಗೆ ಗೌಡ ಮನೆ ಉಪಸ್ಥಿತರಿದ್ದರು. ಧರ್ಮಸ್ಥಳ ಸುಬ್ರಹ್ಮಣ್ಯ ಪ್ರಸಾದ್ ರವರಿಂದ ಹಕ್ಕೊತ್ತಾಯ ಮಂಡನೆ ಮಾಡಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…