ಕಾಪು: ಅಪಘಾತದಿಂದಾಗಿ ಮಿದುಳು ನಿಷ್ಕ್ರಿಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ಬೋಳಾರ ಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕನ್ನಿ ಪಾರ್ಟಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹಲೀಮಾ ಸಾಬು ಸಭಾಭವನದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದರು.
ತಲೆಗೆ ತೀವ್ರ ಗಾಯಗೊಂಡಿದ್ದ ಅವರನ್ನು ಸ್ನೇಹಿತರಾದ ಪ್ರವೀಣ್ ಮತ್ತು ಅಭಿಷೇಕ್ ಅವರು ಸ್ಥಳೀಯರ ಸಹಾಯದಿಂದ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಅಲ್ಲಿನ ವೈದ್ಯರ ಸೂಚನೆ ಮೆರೆಗೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಶಾಂತ್ರವರ ತಲೆಗೆ ಗಂಭೀರವಾದ ಗಾಯವಾಗಿದ್ದು, ಅವರ ಮೆದುಳು ನಿಷ್ಟ್ರಿಯಗೊಂಡಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಪ್ರಶಾಂತ್ ಕೊನೆಯುಸಿರೆಳೆದರು .
ಇನ್ನೂ ಆಸ್ಪತ್ರೆಯ ವೈದ್ಯರು ಮೃತರ ಸಂಬ0ಧಿಕರಿಗೆ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದ್ದರು. ಮೃತರ ಸಹೋದರಿ ಪ್ರಮೀಳಾ ಅವರು ಸಹೋದರನ ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಇತರ ರೋಗಿಗಳ ಜೀವ ಉಳಿಸುವಲ್ಲಿ ಮಹತ್ತರವಾದ ಪಾತ್ರವಹಿಸಿದ್ದಾರೆ.
ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ ಬಿ. ಜಗನ್ನಾಥ ಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತ ಯುವಕನ ಕಿಡ್ನಿ ಮತ್ತು ಲಿವರ್ ಅನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರ ಮೂಲಕ ಸುರಕ್ಷಿತವಾಗಿ ತೆಗೆದು ಮಂಗಳೂರು ಮತ್ತು ಬೆಂಗಳೂರಿಗೆ ಸಾಗಿಸಲಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…