ಕಾಪು: ಅಪಘಾತದಿಂದಾಗಿ ಮಿದುಳು ನಿಷ್ಕ್ರಿಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ಬೋಳಾರ ಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕನ್ನಿ ಪಾರ್ಟಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹಲೀಮಾ ಸಾಬು ಸಭಾಭವನದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದರು.
ತಲೆಗೆ ತೀವ್ರ ಗಾಯಗೊಂಡಿದ್ದ ಅವರನ್ನು ಸ್ನೇಹಿತರಾದ ಪ್ರವೀಣ್ ಮತ್ತು ಅಭಿಷೇಕ್ ಅವರು ಸ್ಥಳೀಯರ ಸಹಾಯದಿಂದ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಅಲ್ಲಿನ ವೈದ್ಯರ ಸೂಚನೆ ಮೆರೆಗೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಶಾಂತ್ರವರ ತಲೆಗೆ ಗಂಭೀರವಾದ ಗಾಯವಾಗಿದ್ದು, ಅವರ ಮೆದುಳು ನಿಷ್ಟ್ರಿಯಗೊಂಡಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಪ್ರಶಾಂತ್ ಕೊನೆಯುಸಿರೆಳೆದರು .
ಇನ್ನೂ ಆಸ್ಪತ್ರೆಯ ವೈದ್ಯರು ಮೃತರ ಸಂಬ0ಧಿಕರಿಗೆ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದ್ದರು. ಮೃತರ ಸಹೋದರಿ ಪ್ರಮೀಳಾ ಅವರು ಸಹೋದರನ ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಇತರ ರೋಗಿಗಳ ಜೀವ ಉಳಿಸುವಲ್ಲಿ ಮಹತ್ತರವಾದ ಪಾತ್ರವಹಿಸಿದ್ದಾರೆ.
ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ ಬಿ. ಜಗನ್ನಾಥ ಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತ ಯುವಕನ ಕಿಡ್ನಿ ಮತ್ತು ಲಿವರ್ ಅನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರ ಮೂಲಕ ಸುರಕ್ಷಿತವಾಗಿ ತೆಗೆದು ಮಂಗಳೂರು ಮತ್ತು ಬೆಂಗಳೂರಿಗೆ ಸಾಗಿಸಲಾಗಿದೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…