ಸನ್ಮಾನ್ಯ ಶ್ರೀ.ಎಚ್.ಕೆ.ಪಾಟೀಲ, ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕ 04.08.2023 ರಂದು ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದಾರೆ. ಬಳಿಕ ರಸ್ತೆಯಮೂಲಕ ಬಂದು ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಗಸ್ಟ್ 5 ರಂದು ಉಡುಪಿಯಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.ನಂತರ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ಹಾಗೂ ಕಾರ್ಯಕರ್ತರೊಂದಿಗೆ ಸಭೆ. ಬಳಿಕ ಉಡುಪಿ ವೈಕುಂಠ ಬಾಳಿಗೆ ಕಾನೂನು ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ಸಂರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ರವೀಂದ್ರನಾಥ ಶಾನಬಾಗ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ರಾತ್ರಿ ವಿಮಾನದ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಮಂತ್ರಿಗಳ ಕಛೇರಿಯಿಂದ ಮಾಹಿತಿ ಲಭ್ಯವಾಗಿದೆ.



