ಜನ ಮನದ ನಾಡಿ ಮಿಡಿತ

Advertisement

ಧರ್ಮಸ್ಥಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೌಜನ್ಯಳ ಸಹೋದರನ ಮೇಲೆ ಹಲ್ಲೆಗೆ ಯತ್ನ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧರ್ಮಸ್ಥಳದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.


ಇಂದು ಬೆಳ್ತಂಗಡಿಯ ಉಜಿರೆ ಸಮೀಪ ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ಕ್ಷೇತ್ರದ ಬಗ್ಗೆ ಅವಹೇಳನ ಮಾಡಲಾಗ್ತಿದೆ ಎಂದು ಆರೋಪಿಸಿ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಪರ ಧರ್ಮಸ್ಥಳದ ಭಕ್ತರ ಹೆಸರಿನಲ್ಲಿ ಪ್ರತಿಭಟನೆ ಆಯೋಜನೆಯಾಗಿತ್ತು. ಈ ಪ್ರತಿಭಟನೆಯಲ್ಲಿ ಸಂತ್ರಸ್ತ ಸೌಜನ್ಯ ಕುಟುಂಬಸ್ಥರು ಪಾಲ್ಗೊಂಡಿದ್ದರು. ಈ ವೇಳೆ ಹೆಗ್ಗಡೆ ಪರವಾಗಿ ಪ್ರತಿಭಟಿಸುತ್ತಿದ್ದ ವ್ಯಕ್ತಿಯೊರ್ವ ಸೌಜನ್ಯಳ ತಮ್ಮನ ಕಾಲರ್ ಪಟ್ಟಿ ಹಿಡಿದು, ಹಲ್ಲೆಗೆ ಯತ್ನಿಸಿದ್ದಾನೆ.


ಸೌಜನ್ಯ ಕುಟುಂಬಸ್ಥರು ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಂತೆ ಪ್ರತಿಭಟನಾಕಾರರು ಅವರನ್ನು ಸುತ್ತುವರೆದು, ಅವರ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಬಿಳಿ ಬಣ್ಣದ ಶರ್ಟ್ ಧರಿಸಿದ ವ್ಯಕ್ತಿಯೊರ್ವ ಸೌಜನ್ಯಳ ತಮ್ಮ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದು, ಅಲ್ಲೇ ಇದ್ದ ಪೊಲೀಸರು ಆತನನ್ನು ತಡೆದಿದ್ದಾರೆ. ಧರ್ಮದ ನಾಡಿನಲ್ಲಿ ಇಂತಹ ಕೃತ್ಯ ಎಷ್ಟರ ಮಟ್ಟಿಗೆ ಸರಿ, ಅಮಾಯಕಳಾದ ಸೌಜನ್ಯಗೆ ನ್ಯಾಯ ಒದಗಿಸಿ ಕೊಡಿ ಎಂಬ ಕೂಗು ಕೆಲ ಬುದ್ಧಿಮಾಂದ್ಯರಿಗೆ ತಪ್ಪಾಗಿ ಕಾಣಿಸುತ್ತಿದ್ದಿಯಾ?.. ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಪಟ್ಟವರು ತಪ್ಪು ಮಾಡಿಲ್ಲ, ಹಾಗಾದರೆ ಅವರ ಅಧಿಕಾರನ್ನು ಉಪಯೋಗಿಸಿಕೊಂಡು ಅವರ ಊರಿನ ಹೆಣ್ಣು ಮಗಳಿಗೆ ನ್ಯಾಯ ಒದಗಿಸಲಿ ಅವತ್ತು ಧರ್ಮಾಧಿಕಾರಿಗಳಿಗಳನ್ನು ದೂರುತ್ತಿರುವವರೇ ಅವರನ್ನು ಮೆಚ್ಚಿ ಆರಾಧಿಸ್ತಾರೆ ಎಂಬುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಮಾತು.


ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ಆಥವಾ ಧರ್ಮಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಜೊತೆಗೆ ಸೌಜನ್ಯಳಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಈ ಪ್ರತಿಭಟನೆ ನಡೆದಿತ್ತು. ಆದರೆ ಇಲ್ಲಿ ಸಂತ್ರಸ್ತಳ ಕುಟುಂಬದ ವಿರುದ್ಧ ಪ್ರತಿಭಟನೆ ನಡೆದ ಆಗಿತ್ತು. ಎಂಬುವುದು ನೆಟ್ಟಿಗರ ಅಭಿಪ್ರಾಯವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!