ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧರ್ಮಸ್ಥಳದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಇಂದು ಬೆಳ್ತಂಗಡಿಯ ಉಜಿರೆ ಸಮೀಪ ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ಕ್ಷೇತ್ರದ ಬಗ್ಗೆ ಅವಹೇಳನ ಮಾಡಲಾಗ್ತಿದೆ ಎಂದು ಆರೋಪಿಸಿ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಪರ ಧರ್ಮಸ್ಥಳದ ಭಕ್ತರ ಹೆಸರಿನಲ್ಲಿ ಪ್ರತಿಭಟನೆ ಆಯೋಜನೆಯಾಗಿತ್ತು. ಈ ಪ್ರತಿಭಟನೆಯಲ್ಲಿ ಸಂತ್ರಸ್ತ ಸೌಜನ್ಯ ಕುಟುಂಬಸ್ಥರು ಪಾಲ್ಗೊಂಡಿದ್ದರು. ಈ ವೇಳೆ ಹೆಗ್ಗಡೆ ಪರವಾಗಿ ಪ್ರತಿಭಟಿಸುತ್ತಿದ್ದ ವ್ಯಕ್ತಿಯೊರ್ವ ಸೌಜನ್ಯಳ ತಮ್ಮನ ಕಾಲರ್ ಪಟ್ಟಿ ಹಿಡಿದು, ಹಲ್ಲೆಗೆ ಯತ್ನಿಸಿದ್ದಾನೆ.
ಸೌಜನ್ಯ ಕುಟುಂಬಸ್ಥರು ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಂತೆ ಪ್ರತಿಭಟನಾಕಾರರು ಅವರನ್ನು ಸುತ್ತುವರೆದು, ಅವರ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಬಿಳಿ ಬಣ್ಣದ ಶರ್ಟ್ ಧರಿಸಿದ ವ್ಯಕ್ತಿಯೊರ್ವ ಸೌಜನ್ಯಳ ತಮ್ಮ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದು, ಅಲ್ಲೇ ಇದ್ದ ಪೊಲೀಸರು ಆತನನ್ನು ತಡೆದಿದ್ದಾರೆ. ಧರ್ಮದ ನಾಡಿನಲ್ಲಿ ಇಂತಹ ಕೃತ್ಯ ಎಷ್ಟರ ಮಟ್ಟಿಗೆ ಸರಿ, ಅಮಾಯಕಳಾದ ಸೌಜನ್ಯಗೆ ನ್ಯಾಯ ಒದಗಿಸಿ ಕೊಡಿ ಎಂಬ ಕೂಗು ಕೆಲ ಬುದ್ಧಿಮಾಂದ್ಯರಿಗೆ ತಪ್ಪಾಗಿ ಕಾಣಿಸುತ್ತಿದ್ದಿಯಾ?.. ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಪಟ್ಟವರು ತಪ್ಪು ಮಾಡಿಲ್ಲ, ಹಾಗಾದರೆ ಅವರ ಅಧಿಕಾರನ್ನು ಉಪಯೋಗಿಸಿಕೊಂಡು ಅವರ ಊರಿನ ಹೆಣ್ಣು ಮಗಳಿಗೆ ನ್ಯಾಯ ಒದಗಿಸಲಿ ಅವತ್ತು ಧರ್ಮಾಧಿಕಾರಿಗಳಿಗಳನ್ನು ದೂರುತ್ತಿರುವವರೇ ಅವರನ್ನು ಮೆಚ್ಚಿ ಆರಾಧಿಸ್ತಾರೆ ಎಂಬುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಮಾತು.
ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ಆಥವಾ ಧರ್ಮಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಜೊತೆಗೆ ಸೌಜನ್ಯಳಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಈ ಪ್ರತಿಭಟನೆ ನಡೆದಿತ್ತು. ಆದರೆ ಇಲ್ಲಿ ಸಂತ್ರಸ್ತಳ ಕುಟುಂಬದ ವಿರುದ್ಧ ಪ್ರತಿಭಟನೆ ನಡೆದ ಆಗಿತ್ತು. ಎಂಬುವುದು ನೆಟ್ಟಿಗರ ಅಭಿಪ್ರಾಯವಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…