ಜನ ಮನದ ನಾಡಿ ಮಿಡಿತ

Advertisement

ನ್ಯಾಯ ಕೇಳಲು ಬಂದರೆ ಹಲ್ಲೆ; ಸೌಜನ್ಯ ತಾಯಿ ಪೊಲೀಸರಿಗೆ ದೂರು

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕುಟುಂಬಸ್ಥರ ಬಗ್ಗೆ ಅವಹೇಳನಕಾರಿ ಮಾತುಗಳು ಮತ್ತು ಅಪಪ್ರಚಾರಗಳನ್ನು ಖಂಡಿಸಿ ನಿನ್ನೆ ನಡೆದ ಬೃಹತ್ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ ಸೌಜನ್ಯ ಅವರ ತಾಯಿ ಹಾಗೂ ಕುಟುಂಬಸ್ಥರು ನ್ಯಾಯಕ್ಕೆ ಮೊರೆ ಹೋಗಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪಗೌಡ ಎಂಬವರ ಪತ್ನಿ ಕುಸುಮಾವತಿ (48) ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ಮಗಳು ಸೌಜನ್ಯಾ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಳು. ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ಮೊರೆ ಹೋಗಿದ್ದರು. ಈ ಸಂದರ್ಭ ಅಪರಿಚಿತ ವ್ಯಕ್ತಿಗಳು, ಇತರರೊಂದಿಗೆ ಸೇರಿಕೊಂಡು ತನ್ನನ್ನು ತಡೆದು ಮಾನಹಾನಿಗೆ ಯತ್ನಿಸಿದ್ದಲ್ಲದೆ, ತನ್ನ ಮಗ ಜಯರಾಮನಿಗೂ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!