ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಟೆಲಿಗ್ರಾಂ ಆ್ಯಪ್ ಮೂಲಕ ಶಿಕ್ಷಕಿಗೆ ಬೆದರಿಕೆ; ಯುವಕನ ಬಂಧನ

ಟೆಲಿಗ್ರಾಂ ಆ್ಯಪ್ ಮೂಲಕ ಕೊಲೆ ಬೆದರಿಕೆ ಹಾಕಿ ಶಿಕ್ಷಕಿಯೊಬ್ಬರಿಂದ 1 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅತ್ರಿಂಜ ನಿವಾಸಿ ಅಶ್ವಥ್ ಹೆಬ್ಬಾರ್ (23) ಬಂಧಿತ ಆರೋಪಿ.

ಸುಲ್ಕೇರಿ ಗ್ರಾಮದ ಪೆರೋಡಿತ್ತಾಯಕಟ್ಟೆಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜ್ಯೋತಿ ಎಂಬುವವರಿಗೆ ನಕಲಿ ಟೆಲಿಗ್ರಾಂ ಖಾತೆ ಬಳಸಿ ಅಶ್ವಥ್ 3 ಲಕ್ಷ ರೂ. ಹಣ ನೀಡದಿದ್ದರೆ ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಜ್ಯೋತಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಎಎಸ್‌ಐ ಸೌಮ್ಯಾ ಜೆ, ಆನಂದ ಎಂ ಮತ್ತು ತಂಡ ಆ.2ರಂದು ಮಧ್ಯರಾತ್ರಿ ತೆಂಕಕರಂದೂರು ಗ್ರಾಮದ ಗುಂಡೇರಿಯಲ್ಲಿ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿನಿಮಾ ಸ್ಟೈಲ್ ನಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಸಂತ್ರಸ್ತೆ ಜ್ಯೋತಿ ಪೊಲೀಸರ ನೆರವಿನೊಂದಿಗೆ ಒಂದು ಲಕ್ಷ ರೂಪಾಯಿ ನೀಡುವುದಾಗಿ ಆರೋಪಿಗೆ ತಿಳಿಸಿದ್ದಾಳೆ. ಅಳದಂಗಡಿ ಕೆದುವಿನ ಬಳಿ ಹಣ ಇಡುವಂತೆ ಆರೋಪಿ ಹೇಳಿದ್ದಾನೆ. ಬಳಿಕ ಜ್ಯೋತಿಗೆ ಆ ಸ್ಥಳದಲ್ಲಿ ಹಣ ಇಡಬೇಡಿ ಎಂದು ಸಂದೇಶ ರವಾನಿಸಿ ಮೂರ್ನಾಲ್ಕು ಬಾರಿ ಸ್ಥಳ ಬದಲಾಯಿಸಿದ್ದರು.

ಕೊನೆಗೆ ಆರೋಪಿ ಸಂತ್ರಸ್ತೆ ಹಣವನ್ನು ಶಿರ್ಲಾಲುವಿನ ಸವಣಾಳು ಕ್ರಾಸ್ ಬಳಿ ಇಡುವಂತೆ ತಿಳಿಸಿದ್ದಾರೆ. ಅದರಂತೆ ಸಂತ್ರಸ್ತೆ ಜ್ಯೋತಿ ಅವರು ಹಣವಿದ್ದ ಬ್ಯಾಗನ್ನು ಸ್ಥಳದಲ್ಲಿ ಇಟ್ಟಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಸ್ಥಳದಿಂದ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ. ಆದರೆ, ಅಲ್ಲೇ ಅಡಗಿಕೊಂಡಿದ್ದ ಪೊಲೀಸರು ಆತನನ್ನು ಹಿಡಿಯುವ ಮುನ್ನ ಪರಾರಿಯಾಗಿದ್ದಾನೆ.

ಪೊಲೀಸರು ಆರೋಪಿ ಅಶ್ವಥ್ ಹೆಬ್ಬಾರ್‌ನ ಮೊಬೈಲ್ ಫೋನ್ ಟ್ರ್ಯಾಕ್ ಮಾಡಿ ಮಧ್ಯರಾತ್ರಿ ಗುಂಡೇರಿಯಿಂದ ತನ್ನ ಅಣ್ಣನ ಮನೆಯಲ್ಲಿ ಅಡಗಿಕೊಂಡಿದ್ದ ಆತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಬೈಕ್ ಹಾಗೂ ಒಂದು ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!