ಟೆಲಿಗ್ರಾಂ ಆ್ಯಪ್ ಮೂಲಕ ಕೊಲೆ ಬೆದರಿಕೆ ಹಾಕಿ ಶಿಕ್ಷಕಿಯೊಬ್ಬರಿಂದ 1 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅತ್ರಿಂಜ ನಿವಾಸಿ ಅಶ್ವಥ್ ಹೆಬ್ಬಾರ್ (23) ಬಂಧಿತ ಆರೋಪಿ.
ಸುಲ್ಕೇರಿ ಗ್ರಾಮದ ಪೆರೋಡಿತ್ತಾಯಕಟ್ಟೆಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜ್ಯೋತಿ ಎಂಬುವವರಿಗೆ ನಕಲಿ ಟೆಲಿಗ್ರಾಂ ಖಾತೆ ಬಳಸಿ ಅಶ್ವಥ್ 3 ಲಕ್ಷ ರೂ. ಹಣ ನೀಡದಿದ್ದರೆ ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಜ್ಯೋತಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಎಎಸ್ಐ ಸೌಮ್ಯಾ ಜೆ, ಆನಂದ ಎಂ ಮತ್ತು ತಂಡ ಆ.2ರಂದು ಮಧ್ಯರಾತ್ರಿ ತೆಂಕಕರಂದೂರು ಗ್ರಾಮದ ಗುಂಡೇರಿಯಲ್ಲಿ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿನಿಮಾ ಸ್ಟೈಲ್ ನಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಸಂತ್ರಸ್ತೆ ಜ್ಯೋತಿ ಪೊಲೀಸರ ನೆರವಿನೊಂದಿಗೆ ಒಂದು ಲಕ್ಷ ರೂಪಾಯಿ ನೀಡುವುದಾಗಿ ಆರೋಪಿಗೆ ತಿಳಿಸಿದ್ದಾಳೆ. ಅಳದಂಗಡಿ ಕೆದುವಿನ ಬಳಿ ಹಣ ಇಡುವಂತೆ ಆರೋಪಿ ಹೇಳಿದ್ದಾನೆ. ಬಳಿಕ ಜ್ಯೋತಿಗೆ ಆ ಸ್ಥಳದಲ್ಲಿ ಹಣ ಇಡಬೇಡಿ ಎಂದು ಸಂದೇಶ ರವಾನಿಸಿ ಮೂರ್ನಾಲ್ಕು ಬಾರಿ ಸ್ಥಳ ಬದಲಾಯಿಸಿದ್ದರು.
ಕೊನೆಗೆ ಆರೋಪಿ ಸಂತ್ರಸ್ತೆ ಹಣವನ್ನು ಶಿರ್ಲಾಲುವಿನ ಸವಣಾಳು ಕ್ರಾಸ್ ಬಳಿ ಇಡುವಂತೆ ತಿಳಿಸಿದ್ದಾರೆ. ಅದರಂತೆ ಸಂತ್ರಸ್ತೆ ಜ್ಯೋತಿ ಅವರು ಹಣವಿದ್ದ ಬ್ಯಾಗನ್ನು ಸ್ಥಳದಲ್ಲಿ ಇಟ್ಟಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಸ್ಥಳದಿಂದ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ. ಆದರೆ, ಅಲ್ಲೇ ಅಡಗಿಕೊಂಡಿದ್ದ ಪೊಲೀಸರು ಆತನನ್ನು ಹಿಡಿಯುವ ಮುನ್ನ ಪರಾರಿಯಾಗಿದ್ದಾನೆ.
ಪೊಲೀಸರು ಆರೋಪಿ ಅಶ್ವಥ್ ಹೆಬ್ಬಾರ್ನ ಮೊಬೈಲ್ ಫೋನ್ ಟ್ರ್ಯಾಕ್ ಮಾಡಿ ಮಧ್ಯರಾತ್ರಿ ಗುಂಡೇರಿಯಿಂದ ತನ್ನ ಅಣ್ಣನ ಮನೆಯಲ್ಲಿ ಅಡಗಿಕೊಂಡಿದ್ದ ಆತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಬೈಕ್ ಹಾಗೂ ಒಂದು ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…