ಟೆಲಿಗ್ರಾಂ ಆ್ಯಪ್ ಮೂಲಕ ಕೊಲೆ ಬೆದರಿಕೆ ಹಾಕಿ ಶಿಕ್ಷಕಿಯೊಬ್ಬರಿಂದ 1 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅತ್ರಿಂಜ ನಿವಾಸಿ ಅಶ್ವಥ್ ಹೆಬ್ಬಾರ್ (23) ಬಂಧಿತ ಆರೋಪಿ.
ಸುಲ್ಕೇರಿ ಗ್ರಾಮದ ಪೆರೋಡಿತ್ತಾಯಕಟ್ಟೆಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜ್ಯೋತಿ ಎಂಬುವವರಿಗೆ ನಕಲಿ ಟೆಲಿಗ್ರಾಂ ಖಾತೆ ಬಳಸಿ ಅಶ್ವಥ್ 3 ಲಕ್ಷ ರೂ. ಹಣ ನೀಡದಿದ್ದರೆ ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಜ್ಯೋತಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಎಎಸ್ಐ ಸೌಮ್ಯಾ ಜೆ, ಆನಂದ ಎಂ ಮತ್ತು ತಂಡ ಆ.2ರಂದು ಮಧ್ಯರಾತ್ರಿ ತೆಂಕಕರಂದೂರು ಗ್ರಾಮದ ಗುಂಡೇರಿಯಲ್ಲಿ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿನಿಮಾ ಸ್ಟೈಲ್ ನಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಸಂತ್ರಸ್ತೆ ಜ್ಯೋತಿ ಪೊಲೀಸರ ನೆರವಿನೊಂದಿಗೆ ಒಂದು ಲಕ್ಷ ರೂಪಾಯಿ ನೀಡುವುದಾಗಿ ಆರೋಪಿಗೆ ತಿಳಿಸಿದ್ದಾಳೆ. ಅಳದಂಗಡಿ ಕೆದುವಿನ ಬಳಿ ಹಣ ಇಡುವಂತೆ ಆರೋಪಿ ಹೇಳಿದ್ದಾನೆ. ಬಳಿಕ ಜ್ಯೋತಿಗೆ ಆ ಸ್ಥಳದಲ್ಲಿ ಹಣ ಇಡಬೇಡಿ ಎಂದು ಸಂದೇಶ ರವಾನಿಸಿ ಮೂರ್ನಾಲ್ಕು ಬಾರಿ ಸ್ಥಳ ಬದಲಾಯಿಸಿದ್ದರು.
ಕೊನೆಗೆ ಆರೋಪಿ ಸಂತ್ರಸ್ತೆ ಹಣವನ್ನು ಶಿರ್ಲಾಲುವಿನ ಸವಣಾಳು ಕ್ರಾಸ್ ಬಳಿ ಇಡುವಂತೆ ತಿಳಿಸಿದ್ದಾರೆ. ಅದರಂತೆ ಸಂತ್ರಸ್ತೆ ಜ್ಯೋತಿ ಅವರು ಹಣವಿದ್ದ ಬ್ಯಾಗನ್ನು ಸ್ಥಳದಲ್ಲಿ ಇಟ್ಟಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಸ್ಥಳದಿಂದ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ. ಆದರೆ, ಅಲ್ಲೇ ಅಡಗಿಕೊಂಡಿದ್ದ ಪೊಲೀಸರು ಆತನನ್ನು ಹಿಡಿಯುವ ಮುನ್ನ ಪರಾರಿಯಾಗಿದ್ದಾನೆ.
ಪೊಲೀಸರು ಆರೋಪಿ ಅಶ್ವಥ್ ಹೆಬ್ಬಾರ್ನ ಮೊಬೈಲ್ ಫೋನ್ ಟ್ರ್ಯಾಕ್ ಮಾಡಿ ಮಧ್ಯರಾತ್ರಿ ಗುಂಡೇರಿಯಿಂದ ತನ್ನ ಅಣ್ಣನ ಮನೆಯಲ್ಲಿ ಅಡಗಿಕೊಂಡಿದ್ದ ಆತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಬೈಕ್ ಹಾಗೂ ಒಂದು ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…