ಸುರತ್ಕಲ್ : ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಂಘಟನೆಗಳ ಧ್ವನಿಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನಗಳಾಗುತ್ತಿದ್ದು, ಇದು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆವ ಬಂದ ಬಳಿಕ ಮತ್ತಷ್ಟು ಹೆಚ್ಚಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮೂವರು ವಿದ್ಯಾರ್ಥಿನಿಯರು ಮೊಬೈಲ್ ಕ್ಯಾಮರಾ ಅಳವಡಿಸಿ ಮೀಡಿಯಾ ಚಿತ್ರೀಕರಣ ಮಾಡುವ ಗಂಭೀರ ಅಪರಾಧವನ್ನು ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ.
ಇದರ ವಿರುದ್ಧ ಧ್ವನಿ ಎತ್ತಿರುವ ಹಿಂದೂ ಸಮಾಜದ ಮುಖಂಡ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ವೀಣಾ ಶೆಟ್ಟಿ ಸೇರಿದಂತೆ ಹಲವರ ಮೇಲೆ ಪೋಲಿಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಇದಕ್ಕೆಲ್ಲಾ ಮೂಲ ಕಾರಣ ಕಾಂಗ್ರೆಸ್ ಸರಕಾರವಾಗಿದೆ ಎಂದು ಕಿಡಿಕಾರಿದ್ದಾರೆ.
ಉಡುಪಿ ಘಟನೆಯ ವಿವರಗಳನ್ನು ದಾಖಲೆ ಸಮೇತ ರಾಜ್ಯದ ರಾಜ್ಯಪಾಲರಿಗೆ ಕರಾವಳಿ ಬಿಜೆಪಿ ಶಾಸಕರ ನಿಯೋಗ ಹಸ್ತಾಂತರಿಸಿದ್ದು ಪ್ರಕರಣದ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ಸರಕಾರಕ್ಕೆ ಸೂಚಿಸುವಂತೆ ಒತ್ತಾಯವನ್ನ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…