ಜನ ಮನದ ನಾಡಿ ಮಿಡಿತ

Advertisement

ಚಂದ್ರನ ಕಕ್ಷೆ ಸೇರಲಿದೆ ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ- 3 ಬಾಹ್ಯಾಕಾಶ ನೌಕೆ

ಇಸ್ರೋ ಸಂಸ್ಥೆಯ ಕನಸು ನನಾಸಗುವತ್ತಾ ಚಂದ್ರಯಾನ-3 ದಾಪುಕಾಲಿಟ್ಟಿದೆ. ಚಂದ್ರಯಾನ- 3 ಬಾಹ್ಯಾಕಾಶ ನೌಕೆಯು ಇಂದು ಚಂದ್ರನ ಕಕ್ಷೆಯನ್ನು ಸೇರಲಿದೆ. ಪ್ರಕ್ರಿಯೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಂಜೆ 7 ಗಂಟೆಗೆ ಲೂನಾರ್ ಆರ್ಬಿಟ್ ಇಂಜೆಕ್ಷನ್ ಕಾರ್ಯ ಕೈಗೊಳ್ಳಲಿದೆ.


ಜುಲೈ 14ರಂದು ಚಂದ್ರಯಾನ- 3 ಅನ್ನು ನಭಕ್ಕೆ ಉಡಾವಣೆ ಮಾಡಲಾಗಿತ್ತು. ಈಗಾಗಲೇ ಸ್ಪೇಸ್‍ಕ್ರಾಫ್ಟ್ ನಿಗದಿತ ಪ್ರಯಾಣದಲ್ಲಿ 3ನೇ 2ರಷ್ಟು ದೂರ ಪ್ರಯಾಣ ಮಾಡಿದ್ದು, ಆಗಸ್ಟ್ 1 ರಂದು ಭೂಮಿಯ ಕಕ್ಷೆಯಿಂದ ಬೇರ್ಪಟ್ಟು ಚಂದ್ರನ ಕಡೆಗೆ ಪ್ರಯಾಣ ಬೆಳಸಿತ್ತು. ಹೀಗಾಗಿ ಇಂದು ಸಂಜೆ 7 ಗಂಟೆ ಸುಮಾರಿಗೆ ನೌಕೆಯು ಚಂದ್ರನ ಕಕ್ಷೆಯನ್ನು ಸೇರಲಿದೆ.


ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ- 3 ಅನ್ನು ಭಾರೀ ನಿರೀಕ್ಷೆಯನ್ನಿಟ್ಟುಕೊಂಡು ಭೂಮಿಯಿಂದ ನಭಕ್ಕೆ ಹಾರಿಸಲಾಗಿತ್ತು. ಅಂದಿನಿಂದ ಪ್ರಯಾಣದಲ್ಲೇ ಇರುವ ನೌಕೆಯು ಭೂಮಿಯ ಮೇಲಿನ 5 ಕಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಆಗಸ್ಟ್ 4 ರ ವೇಳೆಗೆ ಸ್ಪೇಸ್‍ಕ್ರಾಫ್ಟ್ ಸುಮಾರು 2.6 ಲಕ್ಷ ಕಿ.ಮೀ ದೂರ ಕ್ರಮಿಸಿತ್ತು. ಈ ಬಗ್ಗೆ ಇಸ್ರೋ ಸಂಸ್ಥೆಯು ಪ್ರತಿಯೊಂದನ್ನು ಮಾಹಿತಿ ತಿಳಿಸುತ್ತಲೇ ಬರುತ್ತಿದೆ. ಅದರಂತೆ ಇವತ್ತು ಚಂದ್ರನ ಕಕ್ಷೆಯನ್ನು ನೌಕೆ ಸೇರ್ಪಡೆ ಆಗಲಿದೆ. ಇದರೊಂದಿಗೆ ಆಗಸ್ಟ್ 23 ರಂದು ನೌಕೆಯಲ್ಲಿರುವ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಮೃದುವಾಗಿ ಇಳಿಸಲು ಪ್ರಯತ್ನಿಸಲಾಗುತ್ತದೆ.

ಒಂದು ವೇಳೆ ಈ ಮೃದು ಲ್ಯಾಂಡಿಂಗ್ ಯಶಸ್ವಿಯಾದರೇ ಭಾರತದ ಕೀರ್ತಿ ವಿಶ್ವಮಟ್ಟದಲ್ಲಿ ಸದ್ದು ಮಾಡಲಿದೆ. ಜೊತೆಗೆ ಈ ಸಾಧನೆ ಮಾಡಿದ 4ನೇ ರಾಷ್ಟ್ರ ಎಂಬ ಖ್ಯಾತಿ ಭಾರತ ಪಡೆಯಲಿದೆ. ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿದ ತಕ್ಷಣ ಅದರ ಒಳಗಿಂದ ರೋವರ್ ಹೊರ ಬಂದ ತಕ್ಷಣವೇ ಇಲ್ಲಿಂದಲೇ ಚಂದ್ರನ ಮೇಲೆ ಭಾರತದ ನೂತನ ಅಧ್ಯಯನ ಪ್ರಾರಂಭವಾಗಲಿದೆ. ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!