ಜನ ಮನದ ನಾಡಿ ಮಿಡಿತ

Advertisement

ಚಂದ್ರನ ಕಕ್ಷೆ ಸೇರಲಿದೆ ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ- 3 ಬಾಹ್ಯಾಕಾಶ ನೌಕೆ

ಇಸ್ರೋ ಸಂಸ್ಥೆಯ ಕನಸು ನನಾಸಗುವತ್ತಾ ಚಂದ್ರಯಾನ-3 ದಾಪುಕಾಲಿಟ್ಟಿದೆ. ಚಂದ್ರಯಾನ- 3 ಬಾಹ್ಯಾಕಾಶ ನೌಕೆಯು ಇಂದು ಚಂದ್ರನ ಕಕ್ಷೆಯನ್ನು ಸೇರಲಿದೆ. ಪ್ರಕ್ರಿಯೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಂಜೆ 7 ಗಂಟೆಗೆ ಲೂನಾರ್ ಆರ್ಬಿಟ್ ಇಂಜೆಕ್ಷನ್ ಕಾರ್ಯ ಕೈಗೊಳ್ಳಲಿದೆ.


ಜುಲೈ 14ರಂದು ಚಂದ್ರಯಾನ- 3 ಅನ್ನು ನಭಕ್ಕೆ ಉಡಾವಣೆ ಮಾಡಲಾಗಿತ್ತು. ಈಗಾಗಲೇ ಸ್ಪೇಸ್‍ಕ್ರಾಫ್ಟ್ ನಿಗದಿತ ಪ್ರಯಾಣದಲ್ಲಿ 3ನೇ 2ರಷ್ಟು ದೂರ ಪ್ರಯಾಣ ಮಾಡಿದ್ದು, ಆಗಸ್ಟ್ 1 ರಂದು ಭೂಮಿಯ ಕಕ್ಷೆಯಿಂದ ಬೇರ್ಪಟ್ಟು ಚಂದ್ರನ ಕಡೆಗೆ ಪ್ರಯಾಣ ಬೆಳಸಿತ್ತು. ಹೀಗಾಗಿ ಇಂದು ಸಂಜೆ 7 ಗಂಟೆ ಸುಮಾರಿಗೆ ನೌಕೆಯು ಚಂದ್ರನ ಕಕ್ಷೆಯನ್ನು ಸೇರಲಿದೆ.


ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ- 3 ಅನ್ನು ಭಾರೀ ನಿರೀಕ್ಷೆಯನ್ನಿಟ್ಟುಕೊಂಡು ಭೂಮಿಯಿಂದ ನಭಕ್ಕೆ ಹಾರಿಸಲಾಗಿತ್ತು. ಅಂದಿನಿಂದ ಪ್ರಯಾಣದಲ್ಲೇ ಇರುವ ನೌಕೆಯು ಭೂಮಿಯ ಮೇಲಿನ 5 ಕಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಆಗಸ್ಟ್ 4 ರ ವೇಳೆಗೆ ಸ್ಪೇಸ್‍ಕ್ರಾಫ್ಟ್ ಸುಮಾರು 2.6 ಲಕ್ಷ ಕಿ.ಮೀ ದೂರ ಕ್ರಮಿಸಿತ್ತು. ಈ ಬಗ್ಗೆ ಇಸ್ರೋ ಸಂಸ್ಥೆಯು ಪ್ರತಿಯೊಂದನ್ನು ಮಾಹಿತಿ ತಿಳಿಸುತ್ತಲೇ ಬರುತ್ತಿದೆ. ಅದರಂತೆ ಇವತ್ತು ಚಂದ್ರನ ಕಕ್ಷೆಯನ್ನು ನೌಕೆ ಸೇರ್ಪಡೆ ಆಗಲಿದೆ. ಇದರೊಂದಿಗೆ ಆಗಸ್ಟ್ 23 ರಂದು ನೌಕೆಯಲ್ಲಿರುವ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಮೃದುವಾಗಿ ಇಳಿಸಲು ಪ್ರಯತ್ನಿಸಲಾಗುತ್ತದೆ.

ಒಂದು ವೇಳೆ ಈ ಮೃದು ಲ್ಯಾಂಡಿಂಗ್ ಯಶಸ್ವಿಯಾದರೇ ಭಾರತದ ಕೀರ್ತಿ ವಿಶ್ವಮಟ್ಟದಲ್ಲಿ ಸದ್ದು ಮಾಡಲಿದೆ. ಜೊತೆಗೆ ಈ ಸಾಧನೆ ಮಾಡಿದ 4ನೇ ರಾಷ್ಟ್ರ ಎಂಬ ಖ್ಯಾತಿ ಭಾರತ ಪಡೆಯಲಿದೆ. ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿದ ತಕ್ಷಣ ಅದರ ಒಳಗಿಂದ ರೋವರ್ ಹೊರ ಬಂದ ತಕ್ಷಣವೇ ಇಲ್ಲಿಂದಲೇ ಚಂದ್ರನ ಮೇಲೆ ಭಾರತದ ನೂತನ ಅಧ್ಯಯನ ಪ್ರಾರಂಭವಾಗಲಿದೆ. ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!