ಇಸ್ರೋ ಸಂಸ್ಥೆಯ ಕನಸು ನನಾಸಗುವತ್ತಾ ಚಂದ್ರಯಾನ-3 ದಾಪುಕಾಲಿಟ್ಟಿದೆ. ಚಂದ್ರಯಾನ- 3 ಬಾಹ್ಯಾಕಾಶ ನೌಕೆಯು ಇಂದು ಚಂದ್ರನ ಕಕ್ಷೆಯನ್ನು ಸೇರಲಿದೆ. ಪ್ರಕ್ರಿಯೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಂಜೆ 7 ಗಂಟೆಗೆ ಲೂನಾರ್ ಆರ್ಬಿಟ್ ಇಂಜೆಕ್ಷನ್ ಕಾರ್ಯ ಕೈಗೊಳ್ಳಲಿದೆ.
ಜುಲೈ 14ರಂದು ಚಂದ್ರಯಾನ- 3 ಅನ್ನು ನಭಕ್ಕೆ ಉಡಾವಣೆ ಮಾಡಲಾಗಿತ್ತು. ಈಗಾಗಲೇ ಸ್ಪೇಸ್ಕ್ರಾಫ್ಟ್ ನಿಗದಿತ ಪ್ರಯಾಣದಲ್ಲಿ 3ನೇ 2ರಷ್ಟು ದೂರ ಪ್ರಯಾಣ ಮಾಡಿದ್ದು, ಆಗಸ್ಟ್ 1 ರಂದು ಭೂಮಿಯ ಕಕ್ಷೆಯಿಂದ ಬೇರ್ಪಟ್ಟು ಚಂದ್ರನ ಕಡೆಗೆ ಪ್ರಯಾಣ ಬೆಳಸಿತ್ತು. ಹೀಗಾಗಿ ಇಂದು ಸಂಜೆ 7 ಗಂಟೆ ಸುಮಾರಿಗೆ ನೌಕೆಯು ಚಂದ್ರನ ಕಕ್ಷೆಯನ್ನು ಸೇರಲಿದೆ.
ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ- 3 ಅನ್ನು ಭಾರೀ ನಿರೀಕ್ಷೆಯನ್ನಿಟ್ಟುಕೊಂಡು ಭೂಮಿಯಿಂದ ನಭಕ್ಕೆ ಹಾರಿಸಲಾಗಿತ್ತು. ಅಂದಿನಿಂದ ಪ್ರಯಾಣದಲ್ಲೇ ಇರುವ ನೌಕೆಯು ಭೂಮಿಯ ಮೇಲಿನ 5 ಕಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಆಗಸ್ಟ್ 4 ರ ವೇಳೆಗೆ ಸ್ಪೇಸ್ಕ್ರಾಫ್ಟ್ ಸುಮಾರು 2.6 ಲಕ್ಷ ಕಿ.ಮೀ ದೂರ ಕ್ರಮಿಸಿತ್ತು. ಈ ಬಗ್ಗೆ ಇಸ್ರೋ ಸಂಸ್ಥೆಯು ಪ್ರತಿಯೊಂದನ್ನು ಮಾಹಿತಿ ತಿಳಿಸುತ್ತಲೇ ಬರುತ್ತಿದೆ. ಅದರಂತೆ ಇವತ್ತು ಚಂದ್ರನ ಕಕ್ಷೆಯನ್ನು ನೌಕೆ ಸೇರ್ಪಡೆ ಆಗಲಿದೆ. ಇದರೊಂದಿಗೆ ಆಗಸ್ಟ್ 23 ರಂದು ನೌಕೆಯಲ್ಲಿರುವ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಮೃದುವಾಗಿ ಇಳಿಸಲು ಪ್ರಯತ್ನಿಸಲಾಗುತ್ತದೆ.
ಒಂದು ವೇಳೆ ಈ ಮೃದು ಲ್ಯಾಂಡಿಂಗ್ ಯಶಸ್ವಿಯಾದರೇ ಭಾರತದ ಕೀರ್ತಿ ವಿಶ್ವಮಟ್ಟದಲ್ಲಿ ಸದ್ದು ಮಾಡಲಿದೆ. ಜೊತೆಗೆ ಈ ಸಾಧನೆ ಮಾಡಿದ 4ನೇ ರಾಷ್ಟ್ರ ಎಂಬ ಖ್ಯಾತಿ ಭಾರತ ಪಡೆಯಲಿದೆ. ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿದ ತಕ್ಷಣ ಅದರ ಒಳಗಿಂದ ರೋವರ್ ಹೊರ ಬಂದ ತಕ್ಷಣವೇ ಇಲ್ಲಿಂದಲೇ ಚಂದ್ರನ ಮೇಲೆ ಭಾರತದ ನೂತನ ಅಧ್ಯಯನ ಪ್ರಾರಂಭವಾಗಲಿದೆ. ಎಂಬ ಮಾಹಿತಿ ಲಭ್ಯವಾಗಿದೆ.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…