ಜನ ಮನದ ನಾಡಿ ಮಿಡಿತ

Advertisement

ಇದೆಂಥಾ ಲವ್ ಮಾರ್ರೆ..! ಪ್ರೇಯಸಿಯ ಮೇಲೆ ರಾಡ್‍ನಿಂದ ಹಲ್ಲೆ ನಡೆಸಿದ ಪಾಗಲ್ ಪ್ರೇಮಿ

ಬೆಂಗಳೂರಿನ ಮೈಕೋಲೇಔಟ್‍ನ ಪಿ.ಜಿಯೊಂದರ ಬಳಿ ಫೆÇೀನ್ ಕಾಲ್ ಅವೈಡ್ ಮಾಡಿದ್ದಕ್ಕೆ ಅನುಮಾನಗೊಂಡ ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ರಾಡ್‍ನಿಂದ ಹೊಡೆದು ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.


ಸ್ನೇಹ ಸಿಕ್ತಾ ಚಟರ್ಜಿ (26) ಎನ್ನುವರು ಹಲ್ಲೆಗೊಳಗಾದ ಯುವತಿಯಾಗಿದ್ದು, ರವಿಕುಮಾರ್ (28) ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ಟೆಕ್ಕಿಯಾಗಿದ್ದ ರವಿಕುಮಾರ್ ಕಳೆದ 1 ವರ್ಷದಿಂದ ಇಂದಿರಾನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಇದೇ ಕಂಪನಿಗೆ ಇಂಟರ್ನ್ ಆಗಿ ಯುವತಿ ಕೆಲಸಕ್ಕೆ ಸೇರಿಕೊಂಡಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿದೆ.

ಇತ್ತೀಚೆಗೆ ಯುವತಿ ಬೇರೆ ಕಂಪನಿಗೆ ಸೇರಿಕೊಂಡು ಅಂತರ ಕಾಯ್ದುಕೊಂಡು ಫೆÇೀನ್ ಕಾಲ್‍ಗಳನ್ನ ಅವೈಡ್ ಮಾಡಿದ್ದಳು. ಕರೆಗಳಿಗೂ ಸರಿಯಾಗಿ ಉತ್ತರಿಸುತ್ತಿರಲಿಲ್ಲ. ಇದರಿಂದ ಪ್ರಿಯಕರ ಅನುಮಾನಗೊಂಡಿದ್ದನು ಎನ್ನಲಾಗಿದೆ. ಇದರಿಂದ ಕೋಪಗೊಂಡು ಆತ ಯುವತಿಯನ್ನು ಪಿಜಿ ಬಳಿ ಕರೆಸಿಕೊಂಡು ಕಬ್ಬಿಣದ ರಾಡ್‍ನಿಂದ ಯುವತಿ ತಲೆಗೆ ಹಲ್ಲೆ ಮಾಡಿದ್ದಾನೆ.

ಇದರಿಂದ ತೀವ್ರ ರಕ್ತ ಸ್ರಾವವಾಗುತ್ತಿದ್ದ ಆಕೆಯನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಸದ್ಯ ನಿಮ್ಹಾನ್ಸ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆ ಸಂಬಂಧ ಮೈಕೋಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಆರೋಪಿ ರವಿಕುಮಾರ್‍ನನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!