ಬೆಂಗಳೂರಿನ ಮೈಕೋಲೇಔಟ್ನ ಪಿ.ಜಿಯೊಂದರ ಬಳಿ ಫೆÇೀನ್ ಕಾಲ್ ಅವೈಡ್ ಮಾಡಿದ್ದಕ್ಕೆ ಅನುಮಾನಗೊಂಡ ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ರಾಡ್ನಿಂದ ಹೊಡೆದು ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.
ಸ್ನೇಹ ಸಿಕ್ತಾ ಚಟರ್ಜಿ (26) ಎನ್ನುವರು ಹಲ್ಲೆಗೊಳಗಾದ ಯುವತಿಯಾಗಿದ್ದು, ರವಿಕುಮಾರ್ (28) ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ಟೆಕ್ಕಿಯಾಗಿದ್ದ ರವಿಕುಮಾರ್ ಕಳೆದ 1 ವರ್ಷದಿಂದ ಇಂದಿರಾನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಇದೇ ಕಂಪನಿಗೆ ಇಂಟರ್ನ್ ಆಗಿ ಯುವತಿ ಕೆಲಸಕ್ಕೆ ಸೇರಿಕೊಂಡಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿದೆ.
ಇತ್ತೀಚೆಗೆ ಯುವತಿ ಬೇರೆ ಕಂಪನಿಗೆ ಸೇರಿಕೊಂಡು ಅಂತರ ಕಾಯ್ದುಕೊಂಡು ಫೆÇೀನ್ ಕಾಲ್ಗಳನ್ನ ಅವೈಡ್ ಮಾಡಿದ್ದಳು. ಕರೆಗಳಿಗೂ ಸರಿಯಾಗಿ ಉತ್ತರಿಸುತ್ತಿರಲಿಲ್ಲ. ಇದರಿಂದ ಪ್ರಿಯಕರ ಅನುಮಾನಗೊಂಡಿದ್ದನು ಎನ್ನಲಾಗಿದೆ. ಇದರಿಂದ ಕೋಪಗೊಂಡು ಆತ ಯುವತಿಯನ್ನು ಪಿಜಿ ಬಳಿ ಕರೆಸಿಕೊಂಡು ಕಬ್ಬಿಣದ ರಾಡ್ನಿಂದ ಯುವತಿ ತಲೆಗೆ ಹಲ್ಲೆ ಮಾಡಿದ್ದಾನೆ.
ಇದರಿಂದ ತೀವ್ರ ರಕ್ತ ಸ್ರಾವವಾಗುತ್ತಿದ್ದ ಆಕೆಯನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಸದ್ಯ ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆ ಸಂಬಂಧ ಮೈಕೋಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಆರೋಪಿ ರವಿಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…