ಜನ ಮನದ ನಾಡಿ ಮಿಡಿತ

Advertisement

ಬಿಪಿಎಲ್ ಕಾರ್ಡ್‍ಗೆ ಡಿಮ್ಯಾಂಡೋ ಡಿಮ್ಯಾಂಡ್..! ಇಂದಿನಿಂದ ರೇಶನ್ ಕಾರ್ಡ್‍ಗೆ ಅರ್ಜಿ ಸ್ವೀಕಾರ ಶುರು..

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಎಫೆಕ್ಟ್​​ನಿಂದ ಬಿಪಿಎಲ್ ಕಾರ್ಡ್‍ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಶುರುವಾಗಿದ್ದು, ಈಗಾಗಲೇ 5 ಕೆ.ಜಿ ಅಕ್ಕಿ ಬದಲು ಸಿದ್ದರಾಮಯ್ಯ ಸರ್ಕಾರ ಹಣ ನೀಡುತ್ತಿದೆ. ಇದು ಜನರಿಗೆ ಮತ್ತಷ್ಟು ಖುಷಿ ತಂದಿದೆ.

ಇನ್ನೂ ಬಿಪಿಎಲ್ ಕಾರ್ಡ್‍ನವರಿಗೆ ಮಾತ್ರ ಈ ಕೃಷಿ ಭಾಗ್ಯವಿತ್ತು ಇದರಿಂದಾಗಿ ಎಪಿಎಲ್ ಕಾರ್ಡ್‍ನವರು ನಾವು ಸಿದ್ದರಾಮಯ್ಯ ಸರಕಾರಕ್ಕೆ ನಾವು ವೋಟ್ ಹಾಕಿಲ್ವ ಅಂತ ಸಾರ್ವಜನಿಕರು ಮಾತಾನಾಡಿಕೊಳ್ತ ಇದ್ರು. ಇದೀಗ ಬಿಪಿಎಲ್-ಎಪಿಎಲ್ ಕಾರ್ಡುದಾರರಿಗೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಗುಡ್‍ನ್ಯೂಸ್ ನೀಡಿದ್ದಾರೆ.
ಅನ್ನರಾಮಯ್ಯ ಸರ್ಕಾರದ ಗ್ಯಾರಂಟಿಗಳಲ್ಲಿ 10 ಕೆ.ಜಿ ಅಕ್ಕಿಭಾಗ್ಯ ಒಂದಾಗಿದ್ದು. ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಸರ್ಕಾರ ಉಚಿತ ಪಡಿತರ ಅಕ್ಕಿ ನೀಡ್ತಿದೆ. ಸದ್ಯ 5 ಕೆ.ಜಿ ಅಕ್ಕಿ ಬದಲಾಗಿ ಕೆಜಿ 34 ರೂನಂತೆ ಹಣ ನೀಡ್ತಿದ್ದು ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಲು ಸಜ್ಜಾಗ್ತಿದೆ. ಈ ನಡುವೆ ಬಿಪಿಎಲ್, ಎಪಿಎಲ್ ಕಾರ್ಡ್ ವಂಚಿತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.


ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್‍ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಆದರೆ ಜನರ ಎಷ್ಟೇ ಪ್ರಯತ್ನ ಮಾಡಿದ್ರೂ ಹೊಸ ಕಾಡ್ರ್ಗೆ ಅರ್ಜಿ ಸಲ್ಲಿಕೆ ಮಾಡಲು ಸಾಧ್ಯವಾಗಿರಲಿಲ್ಲ. ಚುನಾವಣೆ ನೀತಿ ಸಂಹಿತೆ ಜಾರಿಯಾದಗಿನಿಂದ ಬಿಪಿಎಲ್ ಕಾರ್ಡ್‍ಗೆ ಅರ್ಜಿ ಸ್ವೀಕಾರವನ್ನ ಆಹಾರ ಇಲಾಖೆ ಸ್ಥಗಿತ ಮಾಡಿತ್ತು.
ಹೆಲ್ತ್ ಎಮರ್ಜೆನ್ಸಿಗೂ ಬಿಪಿಎಲ್ ಕಾರ್ಡ್ ಸಿಗದೇ ಬಡವರು ಪರದಾಡುತ್ತಿದ್ದರು. ಆದರೀಗ ರಾಜ್ಯ ಸರ್ಕಾರ ಹೊಸ ಕಾರ್ಡ್‍ಗಾಗಿ ಕಾಯ್ತಿರುವ ಜನರಿಗೆ ಸಂತಸದ ವಿಷಯವೊಂದಿದೆ. ಹೌದು ಇಂದಿನಿಂದ ಬಿಪಿಎಲ್, ಎಪಿಎಲ್‍ಗೆ ಅರ್ಜಿ ಸ್ವೀಕಾರ ಶುರುವಾಗಿದೆ.


ಕೊನೆಗೂ 3 ತಿಂಗಳ ಬಳಿಕ ಬಿಪಿಎಲ್ ಕಾರ್ಡ್‍ಗೆ ಅರ್ಜಿ ಸ್ವೀಕರಿಸುತ್ತಿದ್ದು, . ಆಹಾರ ಇಲಾಖೆಯ ಫೋರ್ಟಲ್ಇಂದಿನಿಂದ ಒಪನ್ ಆಗಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಆಹಾರ ಇಲಾಖೆ ಹೊಸ ಅಪ್ಲಿಕೇಷನ್ ಪಡೆಯುವುದನ್ನೇ ನಿಲ್ಲಿಸಿಬಿಟ್ಟಿದೆ. ಈ ಬಗ್ಗೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿಯೇ ಪ್ರಕಟ ಮಾಡಿತ್ತು. ಅನಾರೋಗ್ಯದಂಥ ಎಮರ್ಜೆನ್ಸಿ ಇದ್ರರೂ ಬಿಪಿಎಲ್ ಕಾರ್ಡ್ ವಿತರಣೆ ಮಾಡ್ತಿರಲಿಲ್ಲ. ಇನ್ನು ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು 3 ಲಕ್ಷ ಮಂದಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!