ಕರಾವಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದ ದಿನದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ; ಶಾಸಕ ವೇದವ್ಯಾಸ್ ಕಾಮತ್

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದ ದಿನದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರ ಬದುಕು ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.


ಕಳೆದ ಎರಡು ತಿಂಗಳ ಅವಧಿಯಲ್ಲಿ ಬೆಲೆಯೇರಿಕೆಯಿಂದ ಹೈರಾಣಾಗಿರುವ ಶ್ರೀ ಸಾಮಾನ್ಯನ ಕುರಿತು ಕಾಳಜಿಯಿಲ್ಲದ ಸರಕಾರ ಜನರನ್ನು ಲೂಟಿ ಮಾಡುವುದರಲ್ಲೇ ನಿರತವಾಗಿದೆ.
ಗೃಹಜ್ಯೋತಿ ಗ್ಯಾರೆಂಟಿ ಘೋಷಿಸಿದ್ದ ರಾಜ್ಯ ಸರಕಾರ ಜನತೆಗೆ ವಿದ್ಯುತ್ ದರ ಏರಿಕೆಯ ಬರೆ ಹಾಕಿದ್ದು, ವಿದ್ಯುತ್ ದರದಲ್ಲಿ ಗರಿಷ್ಟ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಸರಕಾರ ಜನರಿಗೆ ಮಂಕುಬೂದಿ ಎರಚಿ, 175 ರೂಪಾಯಿಯ ಅಕ್ಕಿ ಉಚಿತ ನೀಡುವುದಾಗಿ ಬೆನ್ನು ತಟ್ಟಿಕೊಳ್ಳುವ ಸರಕಾರ ಹಾಲಿನ ದರ 3 ರೂಪಾಯಿ ಹೆಚ್ಚಿಸಿ, ಪ್ರತಿ ಮನೆಯಿಂದ ತಿಂಗಳಿಗೆ ಕನಿಷ್ಠ 1 ಸಾವಿರಕ್ಕೂ ಅಧಿಕ ರೂಪಾಯಿ ಕೊಳ್ಳೆಹೊಡೆಯುತ್ತಿದೆ. ಮೂರು ತಿಂಗಳ ಹಿಂದೆ ಕೆ.ಜಿಗೆ 38-40 ರೂಪಾಯಿಗಳಷ್ಟಿದ್ದ ಅಕ್ಕಿ ಬೆಲೆ ಇಂದು 50 ರೂಪಾಯಿ ಅಸುಪಾಸಿನಲ್ಲಿದೆ ಎಂದು ಹೇಳಿದರು.
ತರಕಾರಿಗಳ ಬೆಲೆಯೇರಿಕೆಯಿಂದ ರಾಜ್ಯದ ಜನರು ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಸಿ ಸಾಮಾಗ್ರಿಗಳ ಬೆಲೆಯೇರಿಕೆಯಿಂದ ಜನ ಸಾಮಾನ್ಯನ ಮೇಲೆ ಮಾತ್ರವಲ್ಲ ಹೋಟೆಲ್ ಉದ್ಯಮದ ಮೇಲೂ ಪ್ರಭಾವ ಬೀರಿದೆ. ಕಳೆದ ಕೆಲವು ದಿನಗಳಿಂದ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಹೋಟೆಲು ತಿನಿಸುಗಳ ಬೆಲೆಯಲ್ಲೂ ಏರಿಕೆಯಾಗಿದೆ. ಅಂದು ಬೆಲೆಯೇರಿಕೆಯಾಗಿದೆ ಎಂದು ಬೀದಿಗಿಳಿದು ಹೋರಾಟ ಮಾಡಿದ್ದ ಕಾಂಗ್ರೇಸ್ ನಾಯಕರೆಲ್ಲರೂ ನಾಪತ್ತೆಯಾಗಿದ್ದಾರೆ ಎಂದು ಹೇಳಿದರು.


ಶಾಲಾ, ಕಾಲೇಜುಗಳ ವಾಹನಗಳು, ಅತೀ ಭಾರದ ಸರಕು ಸಾಗಣೆ ವಾಹನಗಳು, ಮೋಟಾರು ಕ್ಯಾಬ್ ಗಳ ತೆರಿಗೆ ಹೆಚ್ಚಳ ಮಾಡಲಾಗಿದೆ. ಶಾಲಾ ವಿಧ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸಂಚಾರಕ್ಕೆ ಬಳಸುವ ವಾಹನಗಳ ಪ್ರತಿ ಚದರ ಮೀಟರ್ ತೆರಿಗೆಯನ್ನು 20 ರೂಪಾಯಿಯಿಂದ 100 ರೂಪಾಯಿಗೆ ಏರಿಕೆ ಮಾಡಲಾಗಿದ್ದು ರಾಜ್ಯ ಸರಕಾರವು ಜನರಿಂದ ಲೂಟಿ ಮಾಡುತ್ತಿದೆ.


ಅಬಕಾರಿ ಶುಲ್ಕ ಹೆಚ್ಚಳದಿಂದ ಸರಕಾರ ಬೊಕ್ಕಸ ತುಂಬಿಸಲು ಪ್ರಯತ್ನಿಸುತ್ತಿದೆ. ಸ್ಟಾಂಪ್ ಡ್ಯೂಟಿ ತೆರಿಗೆ ಹೆಚ್ಚಳದಿಂದ ನಗರದಲ್ಲಿ ಔದ್ಯಮಿಕ ಬೆಳವಣಿಗೆಗೆ ಸಮಸ್ಯೆ ಉಂಟಾಗುತ್ತಿದೆ. ನಿರಂತರವಾಗಿ ಜನರನ್ನು ಲೂಟಿ ಮಾಡುವ ಮೂಲಕ ರಾಜ್ಯ ಸರಕಾರವು ಶ್ರೀ ಸಾಮಾನ್ಯನ್ನು ಬೀದಿಗೆ ತಂದು ನಿಲ್ಲಿಸಿದೆ.


ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅವರೇ ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಹೊಂದಿಸುವುದು ಕಷ್ಟ ಎಂಬರ್ಥದಲ್ಲಿ ನೀಡಿರುವ ಹೇಳಿಕೆಯು ಇದಕ್ಕೆ ಪೂರಕವಾಗಿದ್ದು ಜನಸಾಮಾನ್ಯರ ಬೇಡಿಕೆಗಳನ್ನು ರಾಜ್ಯ ಸರಕಾರ ಸಂಪೂರ್ಣ ಕಡೆಗಣಿಸಿ ಆಡಳಿತ ನಡೆಸುತ್ತಿದೆ. ಈ ಕಾರಣಗಳಿಂದಾಗಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಗ್ಯಾರಂಟಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಿಚಾರಗಳಿಗೆ ಸರಕಾರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

8 hours ago

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…

8 hours ago

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…

9 hours ago

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…

9 hours ago

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…

9 hours ago

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…

13 hours ago