ಕರಾವಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದ ದಿನದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ; ಶಾಸಕ ವೇದವ್ಯಾಸ್ ಕಾಮತ್

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದ ದಿನದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರ ಬದುಕು ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.


ಕಳೆದ ಎರಡು ತಿಂಗಳ ಅವಧಿಯಲ್ಲಿ ಬೆಲೆಯೇರಿಕೆಯಿಂದ ಹೈರಾಣಾಗಿರುವ ಶ್ರೀ ಸಾಮಾನ್ಯನ ಕುರಿತು ಕಾಳಜಿಯಿಲ್ಲದ ಸರಕಾರ ಜನರನ್ನು ಲೂಟಿ ಮಾಡುವುದರಲ್ಲೇ ನಿರತವಾಗಿದೆ.
ಗೃಹಜ್ಯೋತಿ ಗ್ಯಾರೆಂಟಿ ಘೋಷಿಸಿದ್ದ ರಾಜ್ಯ ಸರಕಾರ ಜನತೆಗೆ ವಿದ್ಯುತ್ ದರ ಏರಿಕೆಯ ಬರೆ ಹಾಕಿದ್ದು, ವಿದ್ಯುತ್ ದರದಲ್ಲಿ ಗರಿಷ್ಟ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಸರಕಾರ ಜನರಿಗೆ ಮಂಕುಬೂದಿ ಎರಚಿ, 175 ರೂಪಾಯಿಯ ಅಕ್ಕಿ ಉಚಿತ ನೀಡುವುದಾಗಿ ಬೆನ್ನು ತಟ್ಟಿಕೊಳ್ಳುವ ಸರಕಾರ ಹಾಲಿನ ದರ 3 ರೂಪಾಯಿ ಹೆಚ್ಚಿಸಿ, ಪ್ರತಿ ಮನೆಯಿಂದ ತಿಂಗಳಿಗೆ ಕನಿಷ್ಠ 1 ಸಾವಿರಕ್ಕೂ ಅಧಿಕ ರೂಪಾಯಿ ಕೊಳ್ಳೆಹೊಡೆಯುತ್ತಿದೆ. ಮೂರು ತಿಂಗಳ ಹಿಂದೆ ಕೆ.ಜಿಗೆ 38-40 ರೂಪಾಯಿಗಳಷ್ಟಿದ್ದ ಅಕ್ಕಿ ಬೆಲೆ ಇಂದು 50 ರೂಪಾಯಿ ಅಸುಪಾಸಿನಲ್ಲಿದೆ ಎಂದು ಹೇಳಿದರು.
ತರಕಾರಿಗಳ ಬೆಲೆಯೇರಿಕೆಯಿಂದ ರಾಜ್ಯದ ಜನರು ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಸಿ ಸಾಮಾಗ್ರಿಗಳ ಬೆಲೆಯೇರಿಕೆಯಿಂದ ಜನ ಸಾಮಾನ್ಯನ ಮೇಲೆ ಮಾತ್ರವಲ್ಲ ಹೋಟೆಲ್ ಉದ್ಯಮದ ಮೇಲೂ ಪ್ರಭಾವ ಬೀರಿದೆ. ಕಳೆದ ಕೆಲವು ದಿನಗಳಿಂದ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಹೋಟೆಲು ತಿನಿಸುಗಳ ಬೆಲೆಯಲ್ಲೂ ಏರಿಕೆಯಾಗಿದೆ. ಅಂದು ಬೆಲೆಯೇರಿಕೆಯಾಗಿದೆ ಎಂದು ಬೀದಿಗಿಳಿದು ಹೋರಾಟ ಮಾಡಿದ್ದ ಕಾಂಗ್ರೇಸ್ ನಾಯಕರೆಲ್ಲರೂ ನಾಪತ್ತೆಯಾಗಿದ್ದಾರೆ ಎಂದು ಹೇಳಿದರು.


ಶಾಲಾ, ಕಾಲೇಜುಗಳ ವಾಹನಗಳು, ಅತೀ ಭಾರದ ಸರಕು ಸಾಗಣೆ ವಾಹನಗಳು, ಮೋಟಾರು ಕ್ಯಾಬ್ ಗಳ ತೆರಿಗೆ ಹೆಚ್ಚಳ ಮಾಡಲಾಗಿದೆ. ಶಾಲಾ ವಿಧ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸಂಚಾರಕ್ಕೆ ಬಳಸುವ ವಾಹನಗಳ ಪ್ರತಿ ಚದರ ಮೀಟರ್ ತೆರಿಗೆಯನ್ನು 20 ರೂಪಾಯಿಯಿಂದ 100 ರೂಪಾಯಿಗೆ ಏರಿಕೆ ಮಾಡಲಾಗಿದ್ದು ರಾಜ್ಯ ಸರಕಾರವು ಜನರಿಂದ ಲೂಟಿ ಮಾಡುತ್ತಿದೆ.


ಅಬಕಾರಿ ಶುಲ್ಕ ಹೆಚ್ಚಳದಿಂದ ಸರಕಾರ ಬೊಕ್ಕಸ ತುಂಬಿಸಲು ಪ್ರಯತ್ನಿಸುತ್ತಿದೆ. ಸ್ಟಾಂಪ್ ಡ್ಯೂಟಿ ತೆರಿಗೆ ಹೆಚ್ಚಳದಿಂದ ನಗರದಲ್ಲಿ ಔದ್ಯಮಿಕ ಬೆಳವಣಿಗೆಗೆ ಸಮಸ್ಯೆ ಉಂಟಾಗುತ್ತಿದೆ. ನಿರಂತರವಾಗಿ ಜನರನ್ನು ಲೂಟಿ ಮಾಡುವ ಮೂಲಕ ರಾಜ್ಯ ಸರಕಾರವು ಶ್ರೀ ಸಾಮಾನ್ಯನ್ನು ಬೀದಿಗೆ ತಂದು ನಿಲ್ಲಿಸಿದೆ.


ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅವರೇ ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಹೊಂದಿಸುವುದು ಕಷ್ಟ ಎಂಬರ್ಥದಲ್ಲಿ ನೀಡಿರುವ ಹೇಳಿಕೆಯು ಇದಕ್ಕೆ ಪೂರಕವಾಗಿದ್ದು ಜನಸಾಮಾನ್ಯರ ಬೇಡಿಕೆಗಳನ್ನು ರಾಜ್ಯ ಸರಕಾರ ಸಂಪೂರ್ಣ ಕಡೆಗಣಿಸಿ ಆಡಳಿತ ನಡೆಸುತ್ತಿದೆ. ಈ ಕಾರಣಗಳಿಂದಾಗಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಗ್ಯಾರಂಟಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಿಚಾರಗಳಿಗೆ ಸರಕಾರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

1 day ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

1 day ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

1 day ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 day ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago