ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಕಾರ್ಯಕಾರಿಣಿ ಸದಸ್ಯರಾದ ಶರತ್ ಕುಮಾರ್ ಎಂಬವರ ಮೇಲೆ ಸಮಾಜದ ದ್ವನಿ ಎಂಬ ಫೇಸ್ಬುಕ್ ಪೇಜ್ ನಲ್ಲಿ ಮಾನಹಾನಿ ಬರಹ ಹಾಕಲಾಗಿದ್ದು, ಇದನ್ನು ಖಂಡಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶರತ್ ಕುಮಾರ್ ಕೇಸು ದಾಖಲಿಸಿದ್ದಾರೆ.
ಶಾಮಿಯಾನ ವ್ಯವಹಾರ ನಡೆಸುತ್ತಿರುವ ಶರತ್ ಅವರು ಕೆಲವು ಧಾರ್ಮಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ಇವರ ಬಗ್ಗೆ ಸಮಾಜದ ಧ್ವನಿ ಫೇಸ್ಬುಕ್ ಪುಟದಲ್ಲಿ ಅಪಪ್ರಚಾರ ಮಾಡಿದ್ದಾರೆ, ಇದರಿಂದ ತನ್ನ ಮಾನಹಾನಿಯಾಗಿದೆ ಎಂದು ಶರತ್ ಕೇಸು ದಾಖಲಿಸಿದ್ದಾರೆ.
ತಾರೀಕು 5-8-2023 ಸಮಯ ಸುಮಾರು ಮಧ್ಯಾಹ್ನ 1:00ಗೆ ನಾನು ಫೇಸ್ಬುಕ್ ಪುಟಗಳನ್ನುವೀಕ್ಷಿಸುತ್ತಿರುವ ಸಂದರ್ಭದಲ್ಲಿ ಸಮಾಜದ ಧ್ವನಿ ಎಂಬ ಫೇಸ್ ಬುಕ್ ಪುಟದಲ್ಲಿ ನಿನ್ನೆ ನಡೆದ ಕೊಡ್ಯಮಲೆ ಅರಣ್ಯದಲ್ಲಿ ನಡೆದ ದಾಳಿಯನ್ನು ಉದ್ದೇಶಿಸಿ ನಾನು ಈ ದಾಳಿಯನ್ನು ಮಾಡುವ ಮುಂಚೆ ಎರಡು ಲಕ್ಷ ರೂಪಾಯಿಯನ್ನು ಬೇಡಿಕೆ ಇಟ್ಟಿದ್ದೆ ಹಾಗೂ ನಾನು ಅಕ್ರಮ ಗೋಸಾಗಣೆಗೆ ಹಣಕೊಸ್ಕರ ಸಹಕಾರ ನೀಡುತ್ತಿದ್ದೇನೆ ಹಾಗೂ ಇನ್ನೂ ಇತರರ ಹೆಸರನ್ನು ನಮೂದಿಸಿ ಅವರ ಹಾಗೆ ನಾನು ಕೂಡ ಅಕ್ರಮ ಚಟುವಟಿಕೆ ಚಟುವಟಿಕೆಗಳಲ್ಲಿ ತೊಡಗಿದ್ದೇನೆ ಎಂದು ಅಪಪ್ರಚಾರ ಮಾಡಿರುತ್ತಾರೆ ಹಾಗೂ ಈ ವಿಚಾರವನ್ನು ಬೆಳ್ತಂಗಡಿ ಕಾಂಗ್ರೆಸ್ ಮತ್ತು ಇನ್ನೂ ಇತರ ಮೂರು ಜನಗಳಿಗೆ ಫೇಸ್ಬುಕ್ ಪುಟದಲ್ಲಿ ಹಂಚಿಕೊಂಡಿರುತ್ತಾರೆ. ಈ ಅಪಪ್ರಚಾರದಿಂದ ನನ್ನ ಗೌರವಕ್ಕೆ ಧಕ್ಕೆಯಾಗಿದ್ದು ನನಗೆ ಮಾನಹಾನಿಯಾಗಿರುತ್ತದೆ. ಈ ಬಗ್ಗೆ ಸೂಕ್ತ ತನಿಖೆಯನ್ನು ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಶರತ್ ಕೋರಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…