ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಗ್ರಾಮಾಂತರ ಠಾಣಾ ಪೋಲೀಸರಿಂದ ಅಡಿಕೆ ಕಳ್ಳತನದ ಎರಡು ಆರೋಪಿಗಳ ಬಂಧನ ಸುಮಾರು ರೂಪಾಯಿ 1 ಲಕ್ಷದ 56 ಸಾವಿರ ಮೌಲ್ಯದ ಸೊತ್ತು ವಶ

ಪುತ್ತೂರು ತಾಲೂಕು ಮಾಡೂರು ಗ್ರಾಮದ ಅಮ್ಮಿನಡ್ಕ ಎಂಬಲ್ಲಿರುವ ವಿಷ್ಣು ಕಲ್ಲೂರಾಯ ರವರು ತಮ್ಮ ಮನೆಯ ಉಗ್ರಾಣದಲ್ಲಿ ಶೇಖರಿಸಿದ 10 ಪ್ಲಾಸ್ಟಿಕ್ ಗೋಣಿಚೀಲದಲ್ಲಿ ತುಂಬಿಸಿದ್ದ ಸುಮಾರು ಎರಡು ಕ್ವಿಂಟಾಲ್ ಸುಲಿಯದ ಒಣ ಅಡಿಕೆಯನ್ನು ಮತ್ತು ಹುಲ್ಲು ತೆಗೆಯುವ ಮೆಷಿನ್ 19-07-2023 ಬೆಳಿಗ್ಗೆ 10.00 ಗಂಟೆಯಿಂದ 3-೦8-2023 ಬೆಳಿಗ್ಗೆ 9.00 ಗಂಟೆಯ ಮಧ್ಯ ಕಳವಾಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಗಳಾದ ಕಿರಣ್ ಕುಮಾರ್ (27), ಸಂತೋಷ್. ಯು (30) ಎಂಬುವರನ್ನು ಬಂಧಿಸಿದ್ದಾರೆ.

ಸುಮಾರು ರೂಪಾಯಿ 51 ಸಾವಿರ ಮೌಲ್ಯದ ಒಂದು ಕ್ವಿಂಟಲ್ 20 ಕೆಜಿ ಸುಲಿದ ಅಡಿಕೆ ಮತ್ತು ಸುಮಾರು 5000/- ಮೌಲ್ಯದ ಹುಲ್ಲು ತೆಗೆಯುವ ಮಷೀನ್ ಹಾಗೂ ಕಳವು ಮಾಡಲು ಉಪಯೋಗಿಸಿದ ಸುಮಾರು ಒಂದು ಲಕ್ಷ ಮೌಲ್ಯದ ಓಮಿನಿ ಕಾರನ್ನು ವಶಪಡಿಸಿಕೊಂಡಿರುತ್ತಾರೆ. ಈ ಪ್ರಕರಣದ ಪ್ರಮುಖ ಆರೋಪಿ ನೆಕ್ಕಿಲಾಡಿ ನಿವಾಸಿ ಸಿನಾನ್ ಪರಾರಿ ಆಗಿರುತ್ತಾನೆ.

ಈ ಪ್ರಕರಣವನ್ನು ಬೇದಿಸುವಲ್ಲಿ ಪುತ್ತೂರು ಉಪಾಧೀಕ್ಷಕರಾದ ಡಾ ಗಾನ ಪಿ. ಕುಮಾರ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ರವಿ.ಬಿ.ಎಸ್, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ.ಸಿ, ಎಎಸ್‌ಐ ಮುರುಗೇಶ್, ಸಿಬ್ಬಂದಿಗಳಾದ ಬಾಲಕೃಷ್ಣ, ಅದ್ರಾಮ ಪ್ರವೀಣ್ ರ, ಲೋಕೇಶ್, ಜಗದೀಶ್, ಮುನಿಯ ನಾಯ್ಕ ಚಾಲಕರಾದ ಯೋಗೀಶ್ ರವರು ಭಾಗವಹಿಸಿರುತ್ತಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!