ಪುತ್ತೂರು ತಾಲೂಕು ಮಾಡೂರು ಗ್ರಾಮದ ಅಮ್ಮಿನಡ್ಕ ಎಂಬಲ್ಲಿರುವ ವಿಷ್ಣು ಕಲ್ಲೂರಾಯ ರವರು ತಮ್ಮ ಮನೆಯ ಉಗ್ರಾಣದಲ್ಲಿ ಶೇಖರಿಸಿದ 10 ಪ್ಲಾಸ್ಟಿಕ್ ಗೋಣಿಚೀಲದಲ್ಲಿ ತುಂಬಿಸಿದ್ದ ಸುಮಾರು ಎರಡು ಕ್ವಿಂಟಾಲ್ ಸುಲಿಯದ ಒಣ ಅಡಿಕೆಯನ್ನು ಮತ್ತು ಹುಲ್ಲು ತೆಗೆಯುವ ಮೆಷಿನ್ 19-07-2023 ಬೆಳಿಗ್ಗೆ 10.00 ಗಂಟೆಯಿಂದ 3-೦8-2023 ಬೆಳಿಗ್ಗೆ 9.00 ಗಂಟೆಯ ಮಧ್ಯ ಕಳವಾಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಗಳಾದ ಕಿರಣ್ ಕುಮಾರ್ (27), ಸಂತೋಷ್. ಯು (30) ಎಂಬುವರನ್ನು ಬಂಧಿಸಿದ್ದಾರೆ.
ಸುಮಾರು ರೂಪಾಯಿ 51 ಸಾವಿರ ಮೌಲ್ಯದ ಒಂದು ಕ್ವಿಂಟಲ್ 20 ಕೆಜಿ ಸುಲಿದ ಅಡಿಕೆ ಮತ್ತು ಸುಮಾರು 5000/- ಮೌಲ್ಯದ ಹುಲ್ಲು ತೆಗೆಯುವ ಮಷೀನ್ ಹಾಗೂ ಕಳವು ಮಾಡಲು ಉಪಯೋಗಿಸಿದ ಸುಮಾರು ಒಂದು ಲಕ್ಷ ಮೌಲ್ಯದ ಓಮಿನಿ ಕಾರನ್ನು ವಶಪಡಿಸಿಕೊಂಡಿರುತ್ತಾರೆ. ಈ ಪ್ರಕರಣದ ಪ್ರಮುಖ ಆರೋಪಿ ನೆಕ್ಕಿಲಾಡಿ ನಿವಾಸಿ ಸಿನಾನ್ ಪರಾರಿ ಆಗಿರುತ್ತಾನೆ.
ಈ ಪ್ರಕರಣವನ್ನು ಬೇದಿಸುವಲ್ಲಿ ಪುತ್ತೂರು ಉಪಾಧೀಕ್ಷಕರಾದ ಡಾ ಗಾನ ಪಿ. ಕುಮಾರ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ರವಿ.ಬಿ.ಎಸ್, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ.ಸಿ, ಎಎಸ್ಐ ಮುರುಗೇಶ್, ಸಿಬ್ಬಂದಿಗಳಾದ ಬಾಲಕೃಷ್ಣ, ಅದ್ರಾಮ ಪ್ರವೀಣ್ ರ, ಲೋಕೇಶ್, ಜಗದೀಶ್, ಮುನಿಯ ನಾಯ್ಕ ಚಾಲಕರಾದ ಯೋಗೀಶ್ ರವರು ಭಾಗವಹಿಸಿರುತ್ತಾರೆ.
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…