ಪುತ್ತೂರು ತಾಲೂಕು ಮಾಡೂರು ಗ್ರಾಮದ ಅಮ್ಮಿನಡ್ಕ ಎಂಬಲ್ಲಿರುವ ವಿಷ್ಣು ಕಲ್ಲೂರಾಯ ರವರು ತಮ್ಮ ಮನೆಯ ಉಗ್ರಾಣದಲ್ಲಿ ಶೇಖರಿಸಿದ 10 ಪ್ಲಾಸ್ಟಿಕ್ ಗೋಣಿಚೀಲದಲ್ಲಿ ತುಂಬಿಸಿದ್ದ ಸುಮಾರು ಎರಡು ಕ್ವಿಂಟಾಲ್ ಸುಲಿಯದ ಒಣ ಅಡಿಕೆಯನ್ನು ಮತ್ತು ಹುಲ್ಲು ತೆಗೆಯುವ ಮೆಷಿನ್ 19-07-2023 ಬೆಳಿಗ್ಗೆ 10.00 ಗಂಟೆಯಿಂದ 3-೦8-2023 ಬೆಳಿಗ್ಗೆ 9.00 ಗಂಟೆಯ ಮಧ್ಯ ಕಳವಾಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಗಳಾದ ಕಿರಣ್ ಕುಮಾರ್ (27), ಸಂತೋಷ್. ಯು (30) ಎಂಬುವರನ್ನು ಬಂಧಿಸಿದ್ದಾರೆ.
ಸುಮಾರು ರೂಪಾಯಿ 51 ಸಾವಿರ ಮೌಲ್ಯದ ಒಂದು ಕ್ವಿಂಟಲ್ 20 ಕೆಜಿ ಸುಲಿದ ಅಡಿಕೆ ಮತ್ತು ಸುಮಾರು 5000/- ಮೌಲ್ಯದ ಹುಲ್ಲು ತೆಗೆಯುವ ಮಷೀನ್ ಹಾಗೂ ಕಳವು ಮಾಡಲು ಉಪಯೋಗಿಸಿದ ಸುಮಾರು ಒಂದು ಲಕ್ಷ ಮೌಲ್ಯದ ಓಮಿನಿ ಕಾರನ್ನು ವಶಪಡಿಸಿಕೊಂಡಿರುತ್ತಾರೆ. ಈ ಪ್ರಕರಣದ ಪ್ರಮುಖ ಆರೋಪಿ ನೆಕ್ಕಿಲಾಡಿ ನಿವಾಸಿ ಸಿನಾನ್ ಪರಾರಿ ಆಗಿರುತ್ತಾನೆ.
ಈ ಪ್ರಕರಣವನ್ನು ಬೇದಿಸುವಲ್ಲಿ ಪುತ್ತೂರು ಉಪಾಧೀಕ್ಷಕರಾದ ಡಾ ಗಾನ ಪಿ. ಕುಮಾರ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ರವಿ.ಬಿ.ಎಸ್, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ.ಸಿ, ಎಎಸ್ಐ ಮುರುಗೇಶ್, ಸಿಬ್ಬಂದಿಗಳಾದ ಬಾಲಕೃಷ್ಣ, ಅದ್ರಾಮ ಪ್ರವೀಣ್ ರ, ಲೋಕೇಶ್, ಜಗದೀಶ್, ಮುನಿಯ ನಾಯ್ಕ ಚಾಲಕರಾದ ಯೋಗೀಶ್ ರವರು ಭಾಗವಹಿಸಿರುತ್ತಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…