ಜನ ಮನದ ನಾಡಿ ಮಿಡಿತ

Advertisement

ಆಟೋ ಚಾಲಕನಿಗೆ ಹಲ್ಲೆ ಪ್ರಕರಣ ಮೂವರ ಬಂಧನ

ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ಮಾಡಿದ್ದು ಇದೀಗ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿ ಅವಿನಾಶ್ (26) ಧರ್ಮಸ್ಥಳ ನಿವಾಸಿ ನಂದಿತ್ (20) ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿ ಅಕ್ಷತ್ (22) ಬಂಧಿತ ಆರೋಪಿಗಳು. ಮೂವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗೆ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿ ಒಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದರಿಂದ ಬುಧವಾರ ರಾತ್ರಿ ಬೆಂಗಳೂರಿಗೆ ಲಗೇಜ್ ಜೊತೆ ತೆರಳಲು ಉಜಿರೆದ್ವಾರದ ಎದುರು ನಿಂತು ಪರಿಚಯಸ್ತ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆಗಸ್ಟ್ ಎರಡರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡವೊಂದು “ನಿನಗೆ ಹಿಂದು ಯುವತಿಯರೇ ಬೇಕ” ಎಂದು ಬೆದರಿಕೆ ಹಾಕಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಅವರ ಏಳನೇ ಪುತ್ರ ಆಟೋ ಚಾಲಕ ಮೊಹಮ್ಮದ್ ಆಶೀಕ್ (22) ಮೇಲೆ ಹಲ್ಲೆ ನಡೆಸಿದ್ದರು. ಯುವಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾಲಂ 143, 147, 341, 323, 504, 506, R/W 149 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!