ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ಮಾಡಿದ್ದು ಇದೀಗ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿ ಅವಿನಾಶ್ (26) ಧರ್ಮಸ್ಥಳ ನಿವಾಸಿ ನಂದಿತ್ (20) ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿ ಅಕ್ಷತ್ (22) ಬಂಧಿತ ಆರೋಪಿಗಳು. ಮೂವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗೆ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿ ಒಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದರಿಂದ ಬುಧವಾರ ರಾತ್ರಿ ಬೆಂಗಳೂರಿಗೆ ಲಗೇಜ್ ಜೊತೆ ತೆರಳಲು ಉಜಿರೆದ್ವಾರದ ಎದುರು ನಿಂತು ಪರಿಚಯಸ್ತ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆಗಸ್ಟ್ ಎರಡರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡವೊಂದು “ನಿನಗೆ ಹಿಂದು ಯುವತಿಯರೇ ಬೇಕ” ಎಂದು ಬೆದರಿಕೆ ಹಾಕಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಅವರ ಏಳನೇ ಪುತ್ರ ಆಟೋ ಚಾಲಕ ಮೊಹಮ್ಮದ್ ಆಶೀಕ್ (22) ಮೇಲೆ ಹಲ್ಲೆ ನಡೆಸಿದ್ದರು. ಯುವಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾಲಂ 143, 147, 341, 323, 504, 506, R/W 149 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…