ಜನ ಮನದ ನಾಡಿ ಮಿಡಿತ

Advertisement

ಮೋಟಾರ್ ಸೈಕಲ್ ರೇಸಿಂಗ್ ಸ್ಪರ್ಧೆ ವೇಳೆ ಅಪಘಾತ: ಬೆಂಗಳೂರಿನ 13 ವರ್ಷದ ರೈಡರ್ ಶ್ರೇಯಸ್ ಹರೀಶ್ ಸಾವು

ಕನಸುಗಳು ಚಿಗುರುವ ಮುನ್ನವೇ ಅಂತ್ಯಕಂಡ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಶಾಲೆಯ ವಿದ್ಯಾರ್ಥಿ ಶ್ರೇಯಸ್, ಕೇವಲ 13 ವರ್ಷಕ್ಕೆ ತನ್ನ ಜೀವನದ ಪಯಣವನ್ನು ಮುಗಿಸಿದ್ದಾರೆ. ಮದ್ರಾಸ್​ ಇಂಟರ್​ನ್ಯಾಷನಲ್ ಸರ್ಕ್ಯೂಟ್​ನಲ್ಲಿ ನಡೆಯುತ್ತಿದ್ದ ಎಂಆರ್‌ಎಫ್ ಎಂಎಂಎಸ್‌ಸಿ ಎಫ್‌ಎಂಎಸ್‌ಸಿಐ ಭಾರತೀಯ ರಾಷ್ಟ್ರೀಯ ಮೋಟಾರ್‌ ಸೈಕಲ್ ರೇಸ್ ಚಾಂಪಿಯನ್‌ಶಿಪ್‌ನಲ್ಲಿ ಶ್ರೇಯಸ್ ಹರೀಶ್ ಭಾಗವಹಿಸಿದ್ದರು. ಶನಿವಾರ ನಡೆದ ಚಾಂಪಿಯನ್​ಶಿಪ್​​​ನ ಮೂರನೇ ಸುತ್ತಿನ ವೇಳೆ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಚೆನ್ನೈನಲ್ಲಿ ಮದ್ರಾಸ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ ರೇಸಿಂಗ್ ಸ್ಪರ್ಧೆಯಲ್ಲಿ ಶ್ರೇಯಸ್ ಶನಿವಾರ ಬೆಳಗ್ಗೆ ಒಂದು ಹಂತವನ್ನು ಕ್ವಾಲಿಫೈ ಆಗಿದ್ದರು. ಬಳಿಕ ಮೂರನೇ ರೌಂಡಿನಲ್ಲಿ ಅಪಘಾತಕ್ಕೀಡಾಗಿದ್ದರಿಂದ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿತ್ತು. ತಕ್ಷಣವೇ ಆಂಬ್ಯುಲನ್ಸ್​ನಲ್ಲಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ ವೈದ್ಯರು ಪರೀಕ್ಷಿಸಿ, ಶ್ರೇಯಸ್ ಮೃತಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ.

ಶ್ರೇಯಸ್ ತನ್ನ ರೇಸಿಂಗ್ ಪ್ರತಿಭೆಯಿಂದ ಹೊಸ ಅಲೆ ಸೃಷ್ಟಿಸುತ್ತಿದ್ದರು. ಘಟನೆಯಾದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಕಿರಿ ಮತ್ತು ಪ್ರತಿಭಾನ್ವಿತ ರೈಡರ್​ ಅನ್ನು ಕಳೆದುಕೊಂಡಿರುವುದು ದುರಂತ ಎಂದು ಎಂಎಂಎಸ್​ಸಿ ಅಧ್ಯಕ್ಷ ಅಜಿತ್ ಥಾಮಸ್ ಕಂಬಿನಿ ಮಿಡಿದಿದ್ದಾರೆ. ಈ ಮೋಟಾರ್‌ ಸೈಕಲ್ ರೇಸ್ ಚಾಂಪಿಯನ್​ಶಿಪ್​ಅನ್ನು ಶನಿವಾರ ಮತ್ತು ಭಾನುವಾರ ಆಯೋಜಿಸಲಾಗಿತ್ತು. ಘಟನೆಯ ಬಳಿಕ ಈ ಟೂರ್ನಿಯನ್ನು ರದ್ದುಗೊಳಿಸಿ, ರೈಡರ್ ಸಾವಿಗೆ ಎಂಎಂಎಸ್​ಸಿ ಸಂತಾಪ ಸೂಚಿಸಿದೆ.

One Response

  1. ಯಾಕೆ ಸಾವು ಸಂಭಾವಿಸಿತು. ಹೆಲ್ಮೆಟ್ ಡೂಪ್ಲಿಕೇಟ್ ಆಗಿತ್ತಾ ❓️ಇಷ್ಟು ದೊಡ್ಡ ಮಟ್ಟದ compitation ಇರುವಾಗ ಕಾಂಪಿಟೇಷನ್ ಭಾಗವಹಿಸುವ ಎಲ್ಲಾರ ಹೆಲ್ಮೆಟ್, ಧರಿಸುವಂತಹ ಎಲ್ಲಾ ಸೇಫ್ಟಿ ಶೂಗಳನ್ನು ಪರಿಶೀಲಿಸಿ ನಂತರ ಅವಕಾಶ ಕಲ್ಪಿಸಬೇಕು. ಇಲ್ಲಾಂದ್ರೆ ಈ ರೀತಿ ಅವಘಡ ಸಂಭವ ಜಾಸ್ತಿ ಆಗುತ್ತೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!