ಬಂಟರ ಸಂಘ ಸಾಲೆತ್ತೂರು ವಲಯದಿಂದ ಆಯೋಜಿಸಲಾದ “ಆಟಿಡೊಂಜಿ ಬಂಟೆರ್ನ ಸ್ನೇಹಕೂಟ” ವಿಜಯ್ ಶ್ರೀ ಕಲ್ಯಾಣ ಮಂಟಪ ಕುಡ್ತಮುಗೀರುವಿನಲ್ಲಿ ವಿಜ್ರಂಭಣೆಯಿಂದ ನಡೆಯಿತು.
ಬೆಳಗ್ಗೆ ಗಂಟೆ ಒಂಬತ್ತುಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘ ಬಂಟ್ವಾಳದ ಕಾರ್ಯದರ್ಶಿ ಶ್ರೀ ಜಗನ್ನಾಥ ಚೌಟ ಮಾಣಿ ವಹಿಸಿಕೊಂಡರು.
ಶ್ರೀ ದೇವಣ್ಣ ಆಳ್ವ ಎರ್ಮೆನಿಲೆ ಪ್ರಗತಿಪರ ಕೃಷಿಕರು, ಶ್ರೀ ಜತ್ತಪ್ಪ ಪೂಂಜ ಕೊಡಂಗೆ ಪ್ರಗತಿಪರ ಕೃಷಿಕರು, ಶ್ರೀ ಕೆ. ಎಂ. ಶಿವರಾಮ ಶೆಟ್ಟಿ, ನಿವೃತ್ತ ಸೀನಿಯರ್ ಮ್ಯಾನೇಜರ್ ವಿಜಯ ಬ್ಯಾಂಕ್ ಗೌರವ ಉಪಸ್ಥಿತರಿದ್ದರು. ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಸಮಾಜದ ಬಂಟ ಬಂಧುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ವಿವಿಧ ಸ್ಪರ್ಧೆಗಳು ರಸಮಂಜರಿ ಮನೋರಂಜನಾ ಕಾರ್ಯಕ್ರಮ ಮುಂತಾದವುಗಳು ಜರುಗಿದವು.
ಮಧ್ಯಾಹ್ನ 12ರ ನಂತರ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀದೇವಪ್ಪ ಶೇಖರ ಅಧ್ಯಕ್ಷರು ಬಂಟರ ಸಂಘ ಸಾಲೆತ್ತೂರು ವಹಿಸಿಕೊಂಡರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದಂತಹ ಶ್ರೀ ಲೋಕೇಶ್ ಶೆಟ್ಟಿ- ಕೋಶಾಧಿಕಾರಿ ಬಂಟರ ಸಂಘ ಬಂಟ್ವಾಳ, ಶ್ರೀಮತಿ ರಮಾ ಎಸ್ ಭಂಡಾರಿ – ಅಧ್ಯಕ್ಷರು ಮಹಿಳಾ ಬಂಟರ ಸಂಘ ಬಂಟ್ವಾಳ, ಶ್ರೀ ಭುಜಂಗ ರೈ ಪಡಾರಗುತ್ತು – ಆಡಳಿತ ಮೊಕ್ತೇಸರರು ಶ್ರೀ ಮಲರಾಯಿ ಮೂವರ್ ದೈವಗಳು ಕಾಪು ಮಜಲು, ಶ್ರೀ ಲಕ್ಷ್ಮೀನಾರಾಯಣ ಅಡ್ಯಂತಾಯ – ಮಾಜಿ ಅಧ್ಯಕ್ಷರು ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ ಕೊಡಂಗಾಯಿ, ಶ್ರೀ ಗಿರೀಶ್ ಭಂಡಾರಿ ಕುಳಾಲು – ಕೋಶಾಧಿಕಾರಿ ಶ್ರೀ ಧೂಮಾವತಿ ಬಂಟ ದೈವಗಳ ಸೇವಾ ಟ್ರಸ್ಟ್ (ರಿ) ಸಭೆಯನ್ನುದ್ದೇಶಿಸಿ ಮಾತನಾಡಿದರು.
ತದನಂತರ S.S.L.C ಮತ್ತು P.U.C ಯಲ್ಲಿ ಶೇಕಡಾ 90% ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಭಾಗ್ಯರಾಜ್ ಶೆಟ್ಟಿ ಹರೇಕಳ ನಿರೂಪಿಸಿದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…