ಬಂಟರ ಸಂಘ ಸಾಲೆತ್ತೂರು ವಲಯದಿಂದ ಆಯೋಜಿಸಲಾದ “ಆಟಿಡೊಂಜಿ ಬಂಟೆರ್ನ ಸ್ನೇಹಕೂಟ” ವಿಜಯ್ ಶ್ರೀ ಕಲ್ಯಾಣ ಮಂಟಪ ಕುಡ್ತಮುಗೀರುವಿನಲ್ಲಿ ವಿಜ್ರಂಭಣೆಯಿಂದ ನಡೆಯಿತು.
ಬೆಳಗ್ಗೆ ಗಂಟೆ ಒಂಬತ್ತುಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘ ಬಂಟ್ವಾಳದ ಕಾರ್ಯದರ್ಶಿ ಶ್ರೀ ಜಗನ್ನಾಥ ಚೌಟ ಮಾಣಿ ವಹಿಸಿಕೊಂಡರು.
ಶ್ರೀ ದೇವಣ್ಣ ಆಳ್ವ ಎರ್ಮೆನಿಲೆ ಪ್ರಗತಿಪರ ಕೃಷಿಕರು, ಶ್ರೀ ಜತ್ತಪ್ಪ ಪೂಂಜ ಕೊಡಂಗೆ ಪ್ರಗತಿಪರ ಕೃಷಿಕರು, ಶ್ರೀ ಕೆ. ಎಂ. ಶಿವರಾಮ ಶೆಟ್ಟಿ, ನಿವೃತ್ತ ಸೀನಿಯರ್ ಮ್ಯಾನೇಜರ್ ವಿಜಯ ಬ್ಯಾಂಕ್ ಗೌರವ ಉಪಸ್ಥಿತರಿದ್ದರು. ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಸಮಾಜದ ಬಂಟ ಬಂಧುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ವಿವಿಧ ಸ್ಪರ್ಧೆಗಳು ರಸಮಂಜರಿ ಮನೋರಂಜನಾ ಕಾರ್ಯಕ್ರಮ ಮುಂತಾದವುಗಳು ಜರುಗಿದವು.
ಮಧ್ಯಾಹ್ನ 12ರ ನಂತರ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀದೇವಪ್ಪ ಶೇಖರ ಅಧ್ಯಕ್ಷರು ಬಂಟರ ಸಂಘ ಸಾಲೆತ್ತೂರು ವಹಿಸಿಕೊಂಡರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದಂತಹ ಶ್ರೀ ಲೋಕೇಶ್ ಶೆಟ್ಟಿ- ಕೋಶಾಧಿಕಾರಿ ಬಂಟರ ಸಂಘ ಬಂಟ್ವಾಳ, ಶ್ರೀಮತಿ ರಮಾ ಎಸ್ ಭಂಡಾರಿ – ಅಧ್ಯಕ್ಷರು ಮಹಿಳಾ ಬಂಟರ ಸಂಘ ಬಂಟ್ವಾಳ, ಶ್ರೀ ಭುಜಂಗ ರೈ ಪಡಾರಗುತ್ತು – ಆಡಳಿತ ಮೊಕ್ತೇಸರರು ಶ್ರೀ ಮಲರಾಯಿ ಮೂವರ್ ದೈವಗಳು ಕಾಪು ಮಜಲು, ಶ್ರೀ ಲಕ್ಷ್ಮೀನಾರಾಯಣ ಅಡ್ಯಂತಾಯ – ಮಾಜಿ ಅಧ್ಯಕ್ಷರು ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ ಕೊಡಂಗಾಯಿ, ಶ್ರೀ ಗಿರೀಶ್ ಭಂಡಾರಿ ಕುಳಾಲು – ಕೋಶಾಧಿಕಾರಿ ಶ್ರೀ ಧೂಮಾವತಿ ಬಂಟ ದೈವಗಳ ಸೇವಾ ಟ್ರಸ್ಟ್ (ರಿ) ಸಭೆಯನ್ನುದ್ದೇಶಿಸಿ ಮಾತನಾಡಿದರು.
ತದನಂತರ S.S.L.C ಮತ್ತು P.U.C ಯಲ್ಲಿ ಶೇಕಡಾ 90% ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಭಾಗ್ಯರಾಜ್ ಶೆಟ್ಟಿ ಹರೇಕಳ ನಿರೂಪಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…