ಮೂಡುಬಿದಿರೆ: ಮಾನವ ಬದುಕಿನುದ್ದಕ್ಕೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ
ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ .ಮೋಹನ ಆಳ್ವ ಹೇಳಿದರು ಮೂಡುಬಿದಿರೆಯ ಬಂಟರ ಸಂಘದ ಮಹಿಳಾ ಘಟಕದ ವತಿಯಿಂದ ಭಾನುವಾರ ಪಟ್ಟಣದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲ ಜಾತಿ ಸೇರಿದರೆ ಸಮಾಜ. ಮನುಷ್ಯ ದಾನ ಧರ್ಮದ ಮೂಲಕ ಸ್ವಸ್ಥ ಸಮಾಜ ನಿರ್ಮಿಸುವ ಪರಿಕಲ್ಪನೆ ಹೊಂದಿರಬೇಕು. ಬಡವ- ಶ್ರೀಮಂತ ಎನ್ನುವ ಅಂತರ ಕಡಿಮೆಗೊಳಿಸುವುದರತ್ತ ಪ್ರತಿಯೊಬ್ಬರೂ ಚಿತ್ತ ಹರಿಸಬೇಕು ಎಂದು ಸಲಹೆ ನೀಡಿದರು. ಇಂದು ಯುವ ಪೀಳಿಗೆ ಮೊಬೈಲ್ ಗೆ ಜೋತು ಬಿದ್ದು ಸಮಾಜಮುಖಿ ಜೀವನದಿಂದ ಪ್ರತ್ಯೇಕವಾಗಿದ್ದಾರೆ ಕೂಡುಕಟುಂಬದ ಮೂಲಕ ಸಂಸ್ಕಾರ ಪರಿಚಯಿಸಬೇಕಾಗಿದೆ. ಆಗ ಮಾತ್ರ ವ್ಯಕ್ತಿ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು.
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಉಪನ್ಯಾಸ ನೀಡಿ, ಬದಲಾದ ಕಾಲಘಟ್ಟದಲ್ಲಿ ಆಟಿಡೊಂಜಿ ದಿನ ಅನೇಕ ಬಗೆಯಲ್ಲಿ ರೂಪಾಂತರಗೊಂಡಿದೆ. ಈ ಹಿಂದೆ ಆ಼಼ಷಾಡ ಮಾಸದಲ್ಲಿ ತುಳುವರು ಅನುಸರಿಸುತ್ತಿದ್ದ ಸಂಪ್ರದಾಯ ಹಾಗೂ ಆಚರಣೆಯನ್ನು ಯುವ ಪೀಳಿಗೆಗೆ ನೆನಪಿಸುವ ಕಾರ್ಯಕ್ರಮ ಇದಾಗಿದೆ ಎಂದರು. ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಮೂಡುಬಿದಿರೆ ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್ . ಹೆಗ್ಡೆ, ಮಂಗಳೂರಿನ ಬಂಟರ ಮಾತೃ ಸಂಘದ ಕಾರ್ಯಾಕಾರಿ ಸದಸ್ಯೆ ಸಬಿತಾ ಶೆಟ್ಟಿ , ಮೂಡುಬಿದಿರೆ ಬಂಟರ ಸಂಘದ ಗೌರವ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಕಾರ್ಯದರ್ಶಿ ಮೇಘನಾಥ ಶೆಟ್ಟಿ, ಕೋಶಾಧಿಕಾರಿ ಎಂ. ಪುರುಷೋತ್ತಮ ಶೆಟ್ಟಿ, ಮೂಡುಬಿದಿರೆಯ ಯುವ ಬಂಟರ ಸಂಘದ ಅಧ್ಯಕ್ಷ ಜಯಕುಮಾರ್ ಶೆಟ್ಟಿ ಇದ್ದರು.
ಪ್ರಾಪ್ತಿ ಆರ್ ಶೆಟ್ಟಿ ಪ್ರಾರ್ಥಿಸಿ, ಪ್ರಫುಲ್ಲಾ ಶೆಟ್ಟಿ ಸ್ವಾಗತಿಸಿದರು. ರಂಜಿತಾ ಶೆಟ್ಟಿ, ಶಿವ ಪ್ರಸಾದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಅನಿತಾ ಶೆಟ್ಟಿ, ಪದ್ಮಾವತಿ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು ಬಾಕ್ಸ್ ತುಳುನಾಡಿನ ‘ಚೆನ್ನ ಮಣೆ’ ಜಾನಪದ ಆಟದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮದಲ್ಲಿ ಜಾನಪದ ಹಾಡುಗಳು ಮತ್ತು ನೃತ್ಯಗಳು ಆಕರ್ಷಣೆಯಾಗಿದ್ದವು. ತುಳುನಾಡಿನ ವಿವಿಧ ನಮೂನೆ ಖಾದ್ಯಗಳು ಗಮನ ಸೆಳೆಯಿತು. ಬಾಕ್ಸ್ ಸಾಧಕರಿಗೆ ಸನ್ಮಾನ ಹೈನುಗಾರಿಕೆಯಲ್ಲಿ ಸಾಧನೆ ಮಾಡಿದ ನಳಿನಾಕ್ಷಿ, ಪಾಡ್ಡನದಲ್ಲಿ ಸಾಧನೆಗಾಗಿ ಕುಸುಮಾ, ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸುನಂದಾ ಶೆಟ್ಟಿ, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಮೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಬಂಟರ ಸಮುದಾಯ ಅಶಕ್ತರಿಗೆ ಸಹಾಯ ಧನ ನೀಡಲಾಯಿತು. ಘಟಕದ ಸದಸ್ಯರ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…