ಕರಾವಳಿ

ಬಂಟರ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ ಸ್ವಸ್ಥ ಸಮಾಜ ನಿರ್ಮಾಣದ ಪರಿಕಲ್ಪನೆ ಅವಶ್ಯ: ಆಳ್ವ


ಮೂಡುಬಿದಿರೆ: ಮಾನವ ಬದುಕಿನುದ್ದಕ್ಕೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ
ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ .ಮೋಹನ ಆಳ್ವ ಹೇಳಿದರು ಮೂಡುಬಿದಿರೆಯ ಬಂಟರ ಸಂಘದ ಮಹಿಳಾ ಘಟಕದ ವತಿಯಿಂದ ಭಾನುವಾರ ಪಟ್ಟಣದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲ ಜಾತಿ ಸೇರಿದರೆ ಸಮಾಜ. ಮನುಷ್ಯ ದಾನ ಧರ್ಮದ ಮೂಲಕ ಸ್ವಸ್ಥ ಸಮಾಜ ನಿರ್ಮಿಸುವ ಪರಿಕಲ್ಪನೆ ಹೊಂದಿರಬೇಕು. ಬಡವ- ಶ್ರೀಮಂತ ಎನ್ನುವ ಅಂತರ ಕಡಿಮೆಗೊಳಿಸುವುದರತ್ತ ಪ್ರತಿಯೊಬ್ಬರೂ ಚಿತ್ತ ಹರಿಸಬೇಕು ಎಂದು ಸಲಹೆ ನೀಡಿದರು. ಇಂದು ಯುವ ಪೀಳಿಗೆ ಮೊಬೈಲ್ ಗೆ ಜೋತು ಬಿದ್ದು ಸಮಾಜಮುಖಿ ಜೀವನದಿಂದ ಪ್ರತ್ಯೇಕವಾಗಿದ್ದಾರೆ ಕೂಡುಕಟುಂಬದ ಮೂಲಕ ಸಂಸ್ಕಾರ ಪರಿಚಯಿಸಬೇಕಾಗಿದೆ. ಆಗ ಮಾತ್ರ ವ್ಯಕ್ತಿ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು.


ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಉಪನ್ಯಾಸ ನೀಡಿ, ಬದಲಾದ ಕಾಲಘಟ್ಟದಲ್ಲಿ ಆಟಿಡೊಂಜಿ ದಿನ ಅನೇಕ ಬಗೆಯಲ್ಲಿ ರೂಪಾಂತರಗೊಂಡಿದೆ. ಈ ಹಿಂದೆ ಆ಼಼ಷಾಡ ಮಾಸದಲ್ಲಿ ತುಳುವರು ಅನುಸರಿಸುತ್ತಿದ್ದ ಸಂಪ್ರದಾಯ ಹಾಗೂ ಆಚರಣೆಯನ್ನು ಯುವ ಪೀಳಿಗೆಗೆ ನೆನಪಿಸುವ ಕಾರ್ಯಕ್ರಮ ಇದಾಗಿದೆ ಎಂದರು. ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಮೂಡುಬಿದಿರೆ ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್ . ಹೆಗ್ಡೆ, ಮಂಗಳೂರಿನ ಬಂಟರ ಮಾತೃ ಸಂಘದ ಕಾರ್ಯಾಕಾರಿ ಸದಸ್ಯೆ ಸಬಿತಾ ಶೆಟ್ಟಿ , ಮೂಡುಬಿದಿರೆ ಬಂಟರ ಸಂಘದ ಗೌರವ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಕಾರ್ಯದರ್ಶಿ ಮೇಘನಾಥ ಶೆಟ್ಟಿ, ಕೋಶಾಧಿಕಾರಿ ಎಂ. ಪುರುಷೋತ್ತಮ ಶೆಟ್ಟಿ, ಮೂಡುಬಿದಿರೆಯ ಯುವ ಬಂಟರ ಸಂಘದ ಅಧ್ಯಕ್ಷ ಜಯಕುಮಾರ್ ಶೆಟ್ಟಿ ಇದ್ದರು.

ಪ್ರಾಪ್ತಿ ಆರ್ ಶೆಟ್ಟಿ ಪ್ರಾರ್ಥಿಸಿ, ಪ್ರಫುಲ್ಲಾ ಶೆಟ್ಟಿ ಸ್ವಾಗತಿಸಿದರು. ರಂಜಿತಾ ಶೆಟ್ಟಿ, ಶಿವ ಪ್ರಸಾದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಅನಿತಾ ಶೆಟ್ಟಿ, ಪದ್ಮಾವತಿ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು ಬಾಕ್ಸ್ ತುಳುನಾಡಿನ ‘ಚೆನ್ನ ಮಣೆ’ ಜಾನಪದ ಆಟದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮದಲ್ಲಿ ಜಾನಪದ ಹಾಡುಗಳು ಮತ್ತು ನೃತ್ಯಗಳು ಆಕರ್ಷಣೆಯಾಗಿದ್ದವು.  ತುಳುನಾಡಿನ ವಿವಿಧ ನಮೂನೆ ಖಾದ್ಯಗಳು ಗಮನ ಸೆಳೆಯಿತು. ಬಾಕ್ಸ್ ಸಾಧಕರಿಗೆ ಸನ್ಮಾನ ಹೈನುಗಾರಿಕೆಯಲ್ಲಿ ಸಾಧನೆ ಮಾಡಿದ ನಳಿನಾಕ್ಷಿ, ಪಾಡ್ಡನದಲ್ಲಿ ಸಾಧನೆಗಾಗಿ ಕುಸುಮಾ, ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸುನಂದಾ ಶೆಟ್ಟಿ, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಮೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಬಂಟರ ಸಮುದಾಯ ಅಶಕ್ತರಿಗೆ ಸಹಾಯ ಧನ ನೀಡಲಾಯಿತು. ಘಟಕದ ಸದಸ್ಯರ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

1 day ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

2 days ago

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…

2 days ago

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…

4 days ago

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…

4 days ago

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…

4 days ago