ಕರಾವಳಿ

ಬಂಟರ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ ಸ್ವಸ್ಥ ಸಮಾಜ ನಿರ್ಮಾಣದ ಪರಿಕಲ್ಪನೆ ಅವಶ್ಯ: ಆಳ್ವ


ಮೂಡುಬಿದಿರೆ: ಮಾನವ ಬದುಕಿನುದ್ದಕ್ಕೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ
ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ .ಮೋಹನ ಆಳ್ವ ಹೇಳಿದರು ಮೂಡುಬಿದಿರೆಯ ಬಂಟರ ಸಂಘದ ಮಹಿಳಾ ಘಟಕದ ವತಿಯಿಂದ ಭಾನುವಾರ ಪಟ್ಟಣದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲ ಜಾತಿ ಸೇರಿದರೆ ಸಮಾಜ. ಮನುಷ್ಯ ದಾನ ಧರ್ಮದ ಮೂಲಕ ಸ್ವಸ್ಥ ಸಮಾಜ ನಿರ್ಮಿಸುವ ಪರಿಕಲ್ಪನೆ ಹೊಂದಿರಬೇಕು. ಬಡವ- ಶ್ರೀಮಂತ ಎನ್ನುವ ಅಂತರ ಕಡಿಮೆಗೊಳಿಸುವುದರತ್ತ ಪ್ರತಿಯೊಬ್ಬರೂ ಚಿತ್ತ ಹರಿಸಬೇಕು ಎಂದು ಸಲಹೆ ನೀಡಿದರು. ಇಂದು ಯುವ ಪೀಳಿಗೆ ಮೊಬೈಲ್ ಗೆ ಜೋತು ಬಿದ್ದು ಸಮಾಜಮುಖಿ ಜೀವನದಿಂದ ಪ್ರತ್ಯೇಕವಾಗಿದ್ದಾರೆ ಕೂಡುಕಟುಂಬದ ಮೂಲಕ ಸಂಸ್ಕಾರ ಪರಿಚಯಿಸಬೇಕಾಗಿದೆ. ಆಗ ಮಾತ್ರ ವ್ಯಕ್ತಿ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು.


ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಉಪನ್ಯಾಸ ನೀಡಿ, ಬದಲಾದ ಕಾಲಘಟ್ಟದಲ್ಲಿ ಆಟಿಡೊಂಜಿ ದಿನ ಅನೇಕ ಬಗೆಯಲ್ಲಿ ರೂಪಾಂತರಗೊಂಡಿದೆ. ಈ ಹಿಂದೆ ಆ಼಼ಷಾಡ ಮಾಸದಲ್ಲಿ ತುಳುವರು ಅನುಸರಿಸುತ್ತಿದ್ದ ಸಂಪ್ರದಾಯ ಹಾಗೂ ಆಚರಣೆಯನ್ನು ಯುವ ಪೀಳಿಗೆಗೆ ನೆನಪಿಸುವ ಕಾರ್ಯಕ್ರಮ ಇದಾಗಿದೆ ಎಂದರು. ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಮೂಡುಬಿದಿರೆ ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್ . ಹೆಗ್ಡೆ, ಮಂಗಳೂರಿನ ಬಂಟರ ಮಾತೃ ಸಂಘದ ಕಾರ್ಯಾಕಾರಿ ಸದಸ್ಯೆ ಸಬಿತಾ ಶೆಟ್ಟಿ , ಮೂಡುಬಿದಿರೆ ಬಂಟರ ಸಂಘದ ಗೌರವ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಕಾರ್ಯದರ್ಶಿ ಮೇಘನಾಥ ಶೆಟ್ಟಿ, ಕೋಶಾಧಿಕಾರಿ ಎಂ. ಪುರುಷೋತ್ತಮ ಶೆಟ್ಟಿ, ಮೂಡುಬಿದಿರೆಯ ಯುವ ಬಂಟರ ಸಂಘದ ಅಧ್ಯಕ್ಷ ಜಯಕುಮಾರ್ ಶೆಟ್ಟಿ ಇದ್ದರು.

ಪ್ರಾಪ್ತಿ ಆರ್ ಶೆಟ್ಟಿ ಪ್ರಾರ್ಥಿಸಿ, ಪ್ರಫುಲ್ಲಾ ಶೆಟ್ಟಿ ಸ್ವಾಗತಿಸಿದರು. ರಂಜಿತಾ ಶೆಟ್ಟಿ, ಶಿವ ಪ್ರಸಾದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಅನಿತಾ ಶೆಟ್ಟಿ, ಪದ್ಮಾವತಿ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು ಬಾಕ್ಸ್ ತುಳುನಾಡಿನ ‘ಚೆನ್ನ ಮಣೆ’ ಜಾನಪದ ಆಟದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮದಲ್ಲಿ ಜಾನಪದ ಹಾಡುಗಳು ಮತ್ತು ನೃತ್ಯಗಳು ಆಕರ್ಷಣೆಯಾಗಿದ್ದವು.  ತುಳುನಾಡಿನ ವಿವಿಧ ನಮೂನೆ ಖಾದ್ಯಗಳು ಗಮನ ಸೆಳೆಯಿತು. ಬಾಕ್ಸ್ ಸಾಧಕರಿಗೆ ಸನ್ಮಾನ ಹೈನುಗಾರಿಕೆಯಲ್ಲಿ ಸಾಧನೆ ಮಾಡಿದ ನಳಿನಾಕ್ಷಿ, ಪಾಡ್ಡನದಲ್ಲಿ ಸಾಧನೆಗಾಗಿ ಕುಸುಮಾ, ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸುನಂದಾ ಶೆಟ್ಟಿ, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಮೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಬಂಟರ ಸಮುದಾಯ ಅಶಕ್ತರಿಗೆ ಸಹಾಯ ಧನ ನೀಡಲಾಯಿತು. ಘಟಕದ ಸದಸ್ಯರ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…

1 day ago

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…

2 days ago

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…

2 days ago

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…

3 days ago

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…

3 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…

3 days ago