ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಸೂಚನೆಯ ಮೇರೆಗೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಿರಿಯ ನಾಗರಿಕರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಕೆಲವು ಮಂದಿ ಹಿರಿಯ ನಾಗರಿಕರು ಸಮಸ್ಯೆಗಳನ್ನು ತೋಡಿಕೊಂಡ ಹಿನ್ನೆಲೆ ಯಲ್ಲಿ ಪೊಲೀಸ್ ಆಯುಕ್ತರು ಎಲ್ಲಾ ಠಾಣೆಗಳ ಅಧಿಕಾರಿಗಳಿಗೆ ಹಿರಿಯ ನಾಗರಿಕರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸುವಂತೆ ಸೂಚಿಸಿದ್ದರು. ಅದರಂತೆ ಆಯುಕ್ತಾಲಯ ವ್ಯಾಪ್ತಿಯಲ್ಲಿ 438 ಮನೆಗಳಿಗೆ ತೆರಳಿ ಅಲ್ಲಿ ವಾಸವಾಗಿದ್ದ ಹಿರಿಯ ನಾಗರಿಕರನ್ನು ಭೇಟಿ ಮಾಡಿದ್ದರು. ಅದರಲ್ಲೂ ಉರ್ವ ಠಾಣಾ ವ್ಯಾಪ್ತಿಯೊಂದರಲ್ಲೇ 100 ಮನೆಗಳಿಗೆ ಪೊಲೀಸರು ಭೇಟಿ ಮಾಡಿರುವುದಾಗಿ ತಿಳಿದು ಬಂದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…